4:34 AM Friday5 - June 2026
ಬ್ರೇಕಿಂಗ್ ನ್ಯೂಸ್
ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ… ನಿಜವಾಯ್ತು ಮಿಥನ್ ರೈ ಭವಿಷ್ಯವಾಣಿ!: ಕೊನೆಗೂ ಡಿಕೆಶಿ ಆದ್ರು ಸಿಎಂ!!; ಇದೀಗ ವೀಡಿಯೊ… ಸಾಮೂಹಿಕ ನಾಯಕತ್ವದಲ್ಲೇ ಮುಂದುವರಿಯಿರಿ: ಸಿಎಂ ಡಿಕೆಶಿಗೆ ಹೈಕಮಾಂಡ್‌ ಕಟ್ಟುನಿಟ್ಟಿನ ಸೂಚನೆ ಲೈವ್‌ ಬಂದು ಅಭಿಮಾನಿಗಳಿಗೆ ಬಹುಮುಖ್ಯ ಮಾಹಿತಿ ನೀಡಿದ ನಟ ದರ್ಶನ್‌

ಇತ್ತೀಚಿನ ಸುದ್ದಿ

ಜಿಲ್ಲಾಧಿಕಾರಿಗಳು ಮಹಾರಾಜರಲ್ಲ; ಅಧಿಕಾರಿಗಳ ಜತೆ ಸಮನ್ವಯತೆಯಿಂದ ಕೆಲಸ ಮಾಡಿ ಡೆಂಗ್ಯು ನಿಯಂತ್ರಿಸಿ: ಸಿಎಂ ಸಿದ್ದರಾಮಯ್ಯ

08/07/2024, 18:38

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.com

ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎಂಬ ಭಾವನೆ ಇದ್ದರೆ ಪ್ರಗತಿ ಮತ್ತು ಅಭಿವೃದ್ಧಿ ಸಾಧ್ಯವಿಲ್ಲ. ಇಷ್ಟರವರೆಗೆ ಉದಾಸೀನ, ನಿರ್ಲಕ್ಷ್ಯ, ಕರ್ತವ್ಯಲೋಪಕ್ಕೆ ಕೆಳಹಂತದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಇವತ್ತಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಧಿಕಾರಿ, ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ(ಸಿಇಒ) ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಜನಸೇವಕರು ಎಂಬುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಬೇಕು. ಸರಕಾರದ ಕಾರ್ಯಕ್ರಮಗಳು, ಯೋಜನೆಗಳು ಪರಿಣಾಮಕಾರಿಯಾಗಿ ಜನರಿಗೆ ತಲುಪಲು ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳು ಸಮನ್ವಯತೆಯಿಂದ ಕ್ರಿಯಾಶೀಲತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಸರಕಾರದ ಯೋಜನೆಗಳು, ಕಾರ್ಯಕ್ರಮಗಳು ಜನರಿಗೆ ತಲುಪಲು ಸಾಧ್ಯ. ರಾಜ್ಯದಲ್ಲಿ ಡೆಂಗ್ಯು ನಿಯಂತ್ರಣಕ್ಕೆ ಸಮರೋಪಾದಿಯಾಗಿ ಕೆಲಸ ಮಾಡಿ. ಜಿಲ್ಲಾಧಿಕಾರಿಗಳು ಕೆಳ ಹಂತದ ಅಧಿಕಾರಿಗಳ ಜತೆ ಸಭೆ ನಡೆಸಿ ಕ್ಷಿಪ್ರವಾಗಿ ಕೆಲಸ ಮಾಡಿ ಎಂದು ಸೂಚನೆ ನೀಡಿದರು.
ಡಿಸಿಎಂ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್, ಸಚಿವರಾದ ಎಂ.ಬಿ. ಪಾಟೀಲ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು