10:30 AM Tuesday7 - July 2026
ಬ್ರೇಕಿಂಗ್ ನ್ಯೂಸ್
ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.…

ಇತ್ತೀಚಿನ ಸುದ್ದಿ

ಜಿಲ್ಲಾಧಿಕಾರಿಗಳು ಮಹಾರಾಜರಲ್ಲ; ಅಧಿಕಾರಿಗಳ ಜತೆ ಸಮನ್ವಯತೆಯಿಂದ ಕೆಲಸ ಮಾಡಿ ಡೆಂಗ್ಯು ನಿಯಂತ್ರಿಸಿ: ಸಿಎಂ ಸಿದ್ದರಾಮಯ್ಯ

08/07/2024, 18:38

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.com

ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎಂಬ ಭಾವನೆ ಇದ್ದರೆ ಪ್ರಗತಿ ಮತ್ತು ಅಭಿವೃದ್ಧಿ ಸಾಧ್ಯವಿಲ್ಲ. ಇಷ್ಟರವರೆಗೆ ಉದಾಸೀನ, ನಿರ್ಲಕ್ಷ್ಯ, ಕರ್ತವ್ಯಲೋಪಕ್ಕೆ ಕೆಳಹಂತದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಇವತ್ತಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಧಿಕಾರಿ, ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ(ಸಿಇಒ) ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಜನಸೇವಕರು ಎಂಬುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಬೇಕು. ಸರಕಾರದ ಕಾರ್ಯಕ್ರಮಗಳು, ಯೋಜನೆಗಳು ಪರಿಣಾಮಕಾರಿಯಾಗಿ ಜನರಿಗೆ ತಲುಪಲು ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳು ಸಮನ್ವಯತೆಯಿಂದ ಕ್ರಿಯಾಶೀಲತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಸರಕಾರದ ಯೋಜನೆಗಳು, ಕಾರ್ಯಕ್ರಮಗಳು ಜನರಿಗೆ ತಲುಪಲು ಸಾಧ್ಯ. ರಾಜ್ಯದಲ್ಲಿ ಡೆಂಗ್ಯು ನಿಯಂತ್ರಣಕ್ಕೆ ಸಮರೋಪಾದಿಯಾಗಿ ಕೆಲಸ ಮಾಡಿ. ಜಿಲ್ಲಾಧಿಕಾರಿಗಳು ಕೆಳ ಹಂತದ ಅಧಿಕಾರಿಗಳ ಜತೆ ಸಭೆ ನಡೆಸಿ ಕ್ಷಿಪ್ರವಾಗಿ ಕೆಲಸ ಮಾಡಿ ಎಂದು ಸೂಚನೆ ನೀಡಿದರು.
ಡಿಸಿಎಂ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್, ಸಚಿವರಾದ ಎಂ.ಬಿ. ಪಾಟೀಲ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು