12:35 PM Sunday30 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಜಿಲ್ಲಾಧಿಕಾರಿಗಳು ಮಹಾರಾಜರಲ್ಲ; ಅಧಿಕಾರಿಗಳ ಜತೆ ಸಮನ್ವಯತೆಯಿಂದ ಕೆಲಸ ಮಾಡಿ ಡೆಂಗ್ಯು ನಿಯಂತ್ರಿಸಿ: ಸಿಎಂ ಸಿದ್ದರಾಮಯ್ಯ

08/07/2024, 18:38

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.com

ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎಂಬ ಭಾವನೆ ಇದ್ದರೆ ಪ್ರಗತಿ ಮತ್ತು ಅಭಿವೃದ್ಧಿ ಸಾಧ್ಯವಿಲ್ಲ. ಇಷ್ಟರವರೆಗೆ ಉದಾಸೀನ, ನಿರ್ಲಕ್ಷ್ಯ, ಕರ್ತವ್ಯಲೋಪಕ್ಕೆ ಕೆಳಹಂತದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಇವತ್ತಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಧಿಕಾರಿ, ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ(ಸಿಇಒ) ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಜನಸೇವಕರು ಎಂಬುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಬೇಕು. ಸರಕಾರದ ಕಾರ್ಯಕ್ರಮಗಳು, ಯೋಜನೆಗಳು ಪರಿಣಾಮಕಾರಿಯಾಗಿ ಜನರಿಗೆ ತಲುಪಲು ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳು ಸಮನ್ವಯತೆಯಿಂದ ಕ್ರಿಯಾಶೀಲತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಸರಕಾರದ ಯೋಜನೆಗಳು, ಕಾರ್ಯಕ್ರಮಗಳು ಜನರಿಗೆ ತಲುಪಲು ಸಾಧ್ಯ. ರಾಜ್ಯದಲ್ಲಿ ಡೆಂಗ್ಯು ನಿಯಂತ್ರಣಕ್ಕೆ ಸಮರೋಪಾದಿಯಾಗಿ ಕೆಲಸ ಮಾಡಿ. ಜಿಲ್ಲಾಧಿಕಾರಿಗಳು ಕೆಳ ಹಂತದ ಅಧಿಕಾರಿಗಳ ಜತೆ ಸಭೆ ನಡೆಸಿ ಕ್ಷಿಪ್ರವಾಗಿ ಕೆಲಸ ಮಾಡಿ ಎಂದು ಸೂಚನೆ ನೀಡಿದರು.
ಡಿಸಿಎಂ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್, ಸಚಿವರಾದ ಎಂ.ಬಿ. ಪಾಟೀಲ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು