7:57 AM Thursday3 - July 2025
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,…

ಇತ್ತೀಚಿನ ಸುದ್ದಿ

ಜಿಲ್ಲಾಧಿಕಾರಿಗಳು ಮಹಾರಾಜರಲ್ಲ; ಅಧಿಕಾರಿಗಳ ಜತೆ ಸಮನ್ವಯತೆಯಿಂದ ಕೆಲಸ ಮಾಡಿ ಡೆಂಗ್ಯು ನಿಯಂತ್ರಿಸಿ: ಸಿಎಂ ಸಿದ್ದರಾಮಯ್ಯ

08/07/2024, 18:38

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.com

ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎಂಬ ಭಾವನೆ ಇದ್ದರೆ ಪ್ರಗತಿ ಮತ್ತು ಅಭಿವೃದ್ಧಿ ಸಾಧ್ಯವಿಲ್ಲ. ಇಷ್ಟರವರೆಗೆ ಉದಾಸೀನ, ನಿರ್ಲಕ್ಷ್ಯ, ಕರ್ತವ್ಯಲೋಪಕ್ಕೆ ಕೆಳಹಂತದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಇವತ್ತಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಧಿಕಾರಿ, ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ(ಸಿಇಒ) ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಜನಸೇವಕರು ಎಂಬುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಬೇಕು. ಸರಕಾರದ ಕಾರ್ಯಕ್ರಮಗಳು, ಯೋಜನೆಗಳು ಪರಿಣಾಮಕಾರಿಯಾಗಿ ಜನರಿಗೆ ತಲುಪಲು ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳು ಸಮನ್ವಯತೆಯಿಂದ ಕ್ರಿಯಾಶೀಲತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಸರಕಾರದ ಯೋಜನೆಗಳು, ಕಾರ್ಯಕ್ರಮಗಳು ಜನರಿಗೆ ತಲುಪಲು ಸಾಧ್ಯ. ರಾಜ್ಯದಲ್ಲಿ ಡೆಂಗ್ಯು ನಿಯಂತ್ರಣಕ್ಕೆ ಸಮರೋಪಾದಿಯಾಗಿ ಕೆಲಸ ಮಾಡಿ. ಜಿಲ್ಲಾಧಿಕಾರಿಗಳು ಕೆಳ ಹಂತದ ಅಧಿಕಾರಿಗಳ ಜತೆ ಸಭೆ ನಡೆಸಿ ಕ್ಷಿಪ್ರವಾಗಿ ಕೆಲಸ ಮಾಡಿ ಎಂದು ಸೂಚನೆ ನೀಡಿದರು.
ಡಿಸಿಎಂ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್, ಸಚಿವರಾದ ಎಂ.ಬಿ. ಪಾಟೀಲ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು