12:23 PM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಫೇಸ್ಬುಕ್, ವಾಟ್ಸಾಪ್ ಬೆನ್ನಲ್ಲೇ ದೇಶದ ಹಲವೆಡೆ ಜಿಯೋ ಮೊಬೈಲ್ ನೆಟ್ ವರ್ಕ್ ಡೌನ್: ಗ್ರಾಹಕರಲ್ಲಿ ಕ್ಷಮೆಯಾಚಿಸಿದ ಕಂಪನಿ!

06/10/2021, 20:11

ಹೊಸದಿಲ್ಲಿ(reporterkarnataka.com);

ಮೊನ್ನೆಯಷ್ಟೆ ಫೇಸ್‌ಬುಕ್‌, ವಾಟ್ಸಾಪ್, ಇನ್ಟಾಗ್ರಾಂ ಸರ್ವರ್ ಡೌನ್ ಆಗಿದ್ದು, ಇಂದು ದೇಶದ ಹಲವೆಡೆ ಜಿಯೋ ಮೊಬೈಲ್ ನೆಟ್  ವರ್ಕ್ ಡೌನ್ ಆಗಿದೆ. ಈ ಕುರಿತು ಹಲವಾರು ಮಂದಿ ಜಿಯೋ ಬಳಕೆದಾರರು ಟ್ವಿಟರ್ ನಲ್ಲಿ ನೆಟ್ ವರ್ಕ್  ಡೌನ್ ಆಗಿದೆ ಎಂದು ದೂರುಗಳನ್ನು ನೀಡಿದ್ದಾರೆ. #jioddown ಎಂಬುದು ಟ್ವಿಟರ್ ಟ್ರೆಂಡಿಂಗ್ ಕೂಡಾ ಆಗಿದೆ.

ಡೌನ್ ಡಿಟೆಕ್ಟರ್  (Downdetector)ನಲ್ಲಿ ಸುಮಾರು 4000 ಮಂದಿ ಬೆಳಗ್ಗೆಯಿಂದ ಜಿಯೋ ನೆಟ್ ವರ್ಕ್ ಸಮಸ್ಯೆ ಇದೆ ಎಂದು ದೂರು ನೀಡಿದ್ದಾರೆ.

ರಿಲಯನ್ಸ್ ಜಿಯೋದ ಅಧಿಕೃತ ಗ್ರಾಹಕ ಸೇವಾ ಟ್ವಿಟರ್ ಖಾತೆಯಾದ @JioCare ಖಾತೆಗೆ ಸಾಕಷ್ಟು ಮಂದಿ ದೂರುಗಳನ್ನು ನೀಡಿದ್ದಾರೆ. ದೇಶದ ವಿವಿಧ ಕಡೆಗಳಿಂದ ಈ ದೂರುಗಳು ಬಂದಿವೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಜಿಯೋ ನಿಮಗೆ ಉಂಟಾದ ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ ಎಂದಿದೆ.

ಇದರ ಜೊತೆಗೆ ಇಂಟರ್ನೆಟ್ ಸೇವೆಗಳನ್ನು ಬಳಸುವಾಗ ಮತ್ತು ಕರೆ/ಎಸ್‌ಎಂಎಸ್ ಮಾಡುವಾಗ ಇಂತಹ ಸಮಸ್ಯೆ ಎದುರಾಗಬಹುದು. ಈ ಸಮಸ್ಯೆ ತಾತ್ಕಾಲಿಕವಾಗಿದ್ದು, ಆದಷ್ಟು ಬೇಗ ಸಮಸ್ಯೆ ಪರಿಹರಿಸಲಾಗುತ್ತದೆ ಎಂದು ಜಿಯೋ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು