10:37 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಕಾರ್ಮಿಕ ಇಲಾಖೆಯ ಸವಲತ್ತು ಫಲಾನುಭವಿಗಳಿಗೆ ತಲುಪಬೇಕು: ಆರಗ ಜ್ಞಾನೇಂದ್ರ

01/10/2024, 19:40

ರಶ್ಮಿ ಶ್ರೀಕಾಂತ್ ನಾಯಕ್
ತೀರ್ಥಹಳ್ಳಿ ಶಿವಮೊಗ್ಗ
info.reporterkarnataka@gmail.com
ಈಗಾಗಲೇ 100 ಕ್ಕೂ ಹೆಚ್ಚು ಮಂದಿಗೆ ಕಾರ್ಮಿಕ ಕಿಟ್ ವಿತರಣೆ ಮಾಡಿದ್ದೇವೆ. ಈಗ ಉಳಿದ ಕಿಟ್ ಗಳನ್ನು ನೀಡಲಾಗುತ್ತಿದೆ. ಕಾರ್ಮಿಕ ಇಲಾಖೆಯಿಂದ ಬಹಳಷ್ಟು ಅನುಕೂಲ ಇದೆ ಆದರೆ ಅದು ನಿಜವಾದ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಅದನ್ನು ನಿಜವಾದ ಕಾರ್ಮಿಕರಿಗೆ ತಲುಪಿಸುವ ಕೆಲಸ ಆಗಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಮಂಗಳವಾರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕಾರ್ಮಿಕರಿಗೆ ಕಿಟ್ ವಿತರಣೆ ಸಂದರ್ಭದಲ್ಲಿ ಮಾತನಾಡಿದ ಅವರು ನಮ್ಮ ಸರ್ಕಾರ ಇರುವಾಗ ಕಾರ್ಮಿಕ ಇಲಾಖೆಯಲ್ಲಿ 7 ಸಾವಿರ ಕೋಟಿ ಹಣ ಇತ್ತು, ಕೊರೋನ ಸಂದರ್ಭದಲ್ಲಿ ತೀರ್ಥಹಳ್ಳಿಗೆ 15 ಸಾವಿರ ಕಿಟ್ ಬಂದಿತ್ತು, ಹಾಗೆಯೇ 5 ಸಾವಿರ ಹಣ ಪ್ರತಿಯೊಬ್ಬರ ಅಕೌಂಟ್ ಗೆ ಹಾಕಲಾಗಿತ್ತು. ಯಾವುದೇ ಕೆಲಸ ಆರಂಭ ಮಾಡುವಾಗ ಲೈಸೆನ್ಸ್ ಮಾಡಿಸುತ್ತೇವೆ ಹಾಗೆ ಅದನ್ನು ರಿನಿವಲ್ ಮಾಡುವ ಕೆಲಸ ಸಹ ನಿಮ್ಮಿಂದ ಆಗಬೇಕು ಎಂದರು.
ಕಾರ್ಮಿಕರು ಎಂದರೆ ಗಾರೆ, ಮ್ಯಾಕಾನಿಕ್, ಕ್ಷೌರಿಕರು, ಟೈಲರ್ ಹೀಗೆ ಎಲ್ಲರಿಗೂ ಅನುಕೂಲ ಇದೆ. ನಿಜವಾದ ಕಾರ್ಮಿಕ ಫಲಾನುಭವಿಗಳು ಸರಿಯಾದ ದಾಖಲೆ ಕೊಡಬೇಕು, ಮದುವೆ ಆದರೆ 50 ಸಾವಿರ ಹಣ ಬರುತ್ತದೆ, ಮಕ್ಕಳಿಗೆ ಸ್ಕಾಲರ್ ಶಿಪ್ ಕೊಡಲಾಗುತ್ತದೆ. ತೀರ್ಥಹಳ್ಳಿಯಲ್ಲಿ ಕಾರ್ಮಿಕ ಇಲಾಖೆಯಲ್ಲಿ ಸಿಬ್ಬಂದಿಗಳು ಕಡಿಮೆ ಇದ್ದಾರೆ, ತೀರ್ಥಹಳ್ಳಿ ಶಿವಮೊಗ್ಗಕ್ಕೆ ಒಬ್ಬರೇ ಅಧಿಕಾರಿಗಳು ಇದ್ದಾರೆ. ಹಾಗಾಗಿ ಸಮಸ್ಯೆ ಇದೆ ಎಂದರು. ಪ್ರತಿಯೊಬ್ಬ ಕಾರ್ಮಿಕರಿಗೂ ಮಾಹಿತಿ ತಿಳಿಯಬೇಕು, ಸರ್ಕಾರದಿಂದ ಬರುವ ಪ್ರತಿಯೊಂದು ಯೋಜನೆಗಳು ಜನರಿಗೆ ತಲುಪುವಂತೆ ಅಧಿಕಾರಿಗಳು ಮಾಡಬೇಕು ಎಂದರು.
ಕಾರ್ಮಿಕ ಇಲಾಖೆಯ ಅಧಿಕಾರಿ ಸುಚಿತ್ರ ಮಾತನಾಡಿ ಒಂದು ಬಾರಿ ಕಿಟ್ ವಿತರಣೆ ಮಾಡಿದ್ದಾಗ ಕೆಲವರು ಬಂದು ಗಲಾಟೆ ಮಾಡಿದರು. ಕಾರ್ಮಿಕ ಇಲಾಖೆಯ ಜಾಗದಲ್ಲಿ ಸಮಸ್ಯೆ ಆಗಿದ್ದ ಕಾರಣ ಬೇರೆಡೆ ಜಾಗದಲ್ಲಿ 1000 ರೂ ಹಣ ನೀಡಿ ಕಿಟ್ ಇಡಲಾಗಿತ್ತು. ಆದರೆ ಕೆಲವರು ಆ ವಿಷಯದಲ್ಲಿ ರಾಜಕೀಯ ಮಾಡಿ ತಡ ಮಾಡಿದರು ಆ ಕಾರಣದಿಂದ ತಡವಾಯಿತು ಎಂದಾಗ ಶಾಸಕರು ಮಾತ್ರ ಹಂಚುವುದು ಎಂದು ಪ್ರೆಶ್ನೆ ಮಾಡುತ್ತಾರೆ, ಅವರ ಅಪ್ಪನ ಮನೆಯಿಂದ ತಂದು ಹಂಚುತ್ತಾರ? ಇಂತಹ ವಿಷಯದಲ್ಲಿ ರಾಜಕಾರಣ ಮಾಡುವ ಅವಶ್ಯಕತೆ ಏನಿದೆ? ಎಂದು ಆರಗ ಗರಂ ಆದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ರಹಮತುಲ್ಲಾ ಅಸಾದಿ, ಉಪಾಧ್ಯಕ್ಷರಾದ ಗೀತಾ ರಮೇಶ್, ಸದಸ್ಯರಾದ ಜ್ಯೋತಿ ಮೋಹನ್ ಸೇರಿ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು