5:07 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಕಾರ್ಮಿಕ ಇಲಾಖೆಯ ಸವಲತ್ತು ಫಲಾನುಭವಿಗಳಿಗೆ ತಲುಪಬೇಕು: ಆರಗ ಜ್ಞಾನೇಂದ್ರ

01/10/2024, 19:40

ರಶ್ಮಿ ಶ್ರೀಕಾಂತ್ ನಾಯಕ್
ತೀರ್ಥಹಳ್ಳಿ ಶಿವಮೊಗ್ಗ
info.reporterkarnataka@gmail.com
ಈಗಾಗಲೇ 100 ಕ್ಕೂ ಹೆಚ್ಚು ಮಂದಿಗೆ ಕಾರ್ಮಿಕ ಕಿಟ್ ವಿತರಣೆ ಮಾಡಿದ್ದೇವೆ. ಈಗ ಉಳಿದ ಕಿಟ್ ಗಳನ್ನು ನೀಡಲಾಗುತ್ತಿದೆ. ಕಾರ್ಮಿಕ ಇಲಾಖೆಯಿಂದ ಬಹಳಷ್ಟು ಅನುಕೂಲ ಇದೆ ಆದರೆ ಅದು ನಿಜವಾದ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಅದನ್ನು ನಿಜವಾದ ಕಾರ್ಮಿಕರಿಗೆ ತಲುಪಿಸುವ ಕೆಲಸ ಆಗಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಮಂಗಳವಾರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕಾರ್ಮಿಕರಿಗೆ ಕಿಟ್ ವಿತರಣೆ ಸಂದರ್ಭದಲ್ಲಿ ಮಾತನಾಡಿದ ಅವರು ನಮ್ಮ ಸರ್ಕಾರ ಇರುವಾಗ ಕಾರ್ಮಿಕ ಇಲಾಖೆಯಲ್ಲಿ 7 ಸಾವಿರ ಕೋಟಿ ಹಣ ಇತ್ತು, ಕೊರೋನ ಸಂದರ್ಭದಲ್ಲಿ ತೀರ್ಥಹಳ್ಳಿಗೆ 15 ಸಾವಿರ ಕಿಟ್ ಬಂದಿತ್ತು, ಹಾಗೆಯೇ 5 ಸಾವಿರ ಹಣ ಪ್ರತಿಯೊಬ್ಬರ ಅಕೌಂಟ್ ಗೆ ಹಾಕಲಾಗಿತ್ತು. ಯಾವುದೇ ಕೆಲಸ ಆರಂಭ ಮಾಡುವಾಗ ಲೈಸೆನ್ಸ್ ಮಾಡಿಸುತ್ತೇವೆ ಹಾಗೆ ಅದನ್ನು ರಿನಿವಲ್ ಮಾಡುವ ಕೆಲಸ ಸಹ ನಿಮ್ಮಿಂದ ಆಗಬೇಕು ಎಂದರು.
ಕಾರ್ಮಿಕರು ಎಂದರೆ ಗಾರೆ, ಮ್ಯಾಕಾನಿಕ್, ಕ್ಷೌರಿಕರು, ಟೈಲರ್ ಹೀಗೆ ಎಲ್ಲರಿಗೂ ಅನುಕೂಲ ಇದೆ. ನಿಜವಾದ ಕಾರ್ಮಿಕ ಫಲಾನುಭವಿಗಳು ಸರಿಯಾದ ದಾಖಲೆ ಕೊಡಬೇಕು, ಮದುವೆ ಆದರೆ 50 ಸಾವಿರ ಹಣ ಬರುತ್ತದೆ, ಮಕ್ಕಳಿಗೆ ಸ್ಕಾಲರ್ ಶಿಪ್ ಕೊಡಲಾಗುತ್ತದೆ. ತೀರ್ಥಹಳ್ಳಿಯಲ್ಲಿ ಕಾರ್ಮಿಕ ಇಲಾಖೆಯಲ್ಲಿ ಸಿಬ್ಬಂದಿಗಳು ಕಡಿಮೆ ಇದ್ದಾರೆ, ತೀರ್ಥಹಳ್ಳಿ ಶಿವಮೊಗ್ಗಕ್ಕೆ ಒಬ್ಬರೇ ಅಧಿಕಾರಿಗಳು ಇದ್ದಾರೆ. ಹಾಗಾಗಿ ಸಮಸ್ಯೆ ಇದೆ ಎಂದರು. ಪ್ರತಿಯೊಬ್ಬ ಕಾರ್ಮಿಕರಿಗೂ ಮಾಹಿತಿ ತಿಳಿಯಬೇಕು, ಸರ್ಕಾರದಿಂದ ಬರುವ ಪ್ರತಿಯೊಂದು ಯೋಜನೆಗಳು ಜನರಿಗೆ ತಲುಪುವಂತೆ ಅಧಿಕಾರಿಗಳು ಮಾಡಬೇಕು ಎಂದರು.
ಕಾರ್ಮಿಕ ಇಲಾಖೆಯ ಅಧಿಕಾರಿ ಸುಚಿತ್ರ ಮಾತನಾಡಿ ಒಂದು ಬಾರಿ ಕಿಟ್ ವಿತರಣೆ ಮಾಡಿದ್ದಾಗ ಕೆಲವರು ಬಂದು ಗಲಾಟೆ ಮಾಡಿದರು. ಕಾರ್ಮಿಕ ಇಲಾಖೆಯ ಜಾಗದಲ್ಲಿ ಸಮಸ್ಯೆ ಆಗಿದ್ದ ಕಾರಣ ಬೇರೆಡೆ ಜಾಗದಲ್ಲಿ 1000 ರೂ ಹಣ ನೀಡಿ ಕಿಟ್ ಇಡಲಾಗಿತ್ತು. ಆದರೆ ಕೆಲವರು ಆ ವಿಷಯದಲ್ಲಿ ರಾಜಕೀಯ ಮಾಡಿ ತಡ ಮಾಡಿದರು ಆ ಕಾರಣದಿಂದ ತಡವಾಯಿತು ಎಂದಾಗ ಶಾಸಕರು ಮಾತ್ರ ಹಂಚುವುದು ಎಂದು ಪ್ರೆಶ್ನೆ ಮಾಡುತ್ತಾರೆ, ಅವರ ಅಪ್ಪನ ಮನೆಯಿಂದ ತಂದು ಹಂಚುತ್ತಾರ? ಇಂತಹ ವಿಷಯದಲ್ಲಿ ರಾಜಕಾರಣ ಮಾಡುವ ಅವಶ್ಯಕತೆ ಏನಿದೆ? ಎಂದು ಆರಗ ಗರಂ ಆದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ರಹಮತುಲ್ಲಾ ಅಸಾದಿ, ಉಪಾಧ್ಯಕ್ಷರಾದ ಗೀತಾ ರಮೇಶ್, ಸದಸ್ಯರಾದ ಜ್ಯೋತಿ ಮೋಹನ್ ಸೇರಿ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು