10:05 PM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಜ್ಞಾನ ಸಂಪಾದಿಸಲು ಪ್ರಶ್ನೆ ಕೇಳುವ ಧೈರ್ಯ ಮಕ್ಕಳಲ್ಲಿ ಬೆಳೆಸಬೇಕು: ಪಠ್ಯಶಿಕ್ಷಣ ಸಂಪನ್ಮೂಲ ರಾಜ್ಯ ತರಬೇತುದಾರ ಜಯಾನಂದ ಪೆರಾಜೆ

20/12/2023, 11:19

ಬಂಟ್ವಾಳ(reporterkarnataka.com): ಪ್ರಾಥಮಿಕ ಶಿಕ್ಷಣ ಹಂತದಲ್ಲಿ ಕನ್ನಡ ಭಾಷೆ ಕಲಿಕೆಗೆ ಹೆಚ್ಚಿನ ಮಹತ್ವ ನೀಡಬೇಕು. ಜ್ಞಾನ ಸಂಪಾದಿಸಲು ಪ್ರಶ್ನೆ ಕೇಳುವ ಧೈರ್ಯವನ್ನು ಮಕ್ಕಳಲ್ಲಿ ಬೆಳೆಸಬೇಕು ಎಂದು ಪಠ್ಯಶಿಕ್ಷಣ ಸಂಪನ್ಮೂಲ ರಾಜ್ಯ ತರಬೇತುದಾರ ಜಯಾನಂದ ಪೆರಾಜೆ ಹೇಳಿದರು.
ಅವರು ಮಾಣಿ ದ.ಕ.ಜಿ.ಪ.ಮಾ.ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕರಿಗೆ ಏರ್ಪಡಿಸಲಾದ ಭಾಷಾ ಬೋಧನೆಯ ತರಬೇತು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ನಲಿ-ಕಲಿ ಶಿಕ್ಷಕರು ಚಟುವಟಿಕೆಯೊಂದಿಗೆ ಪರಿಣಾಮಕಾರಿಯಾಗಿ ಕನ್ನಡ ಭಾಷಾ ಕಲಿಕೆಯಲ್ಲಿ ಉಚ್ಚಾರ ಮತ್ತು ಅಕ್ಷರ ದೋಷಗಳನ್ನು ತಿದ್ದುವ ಬಗ್ಗೆ ಚರ್ಚಿಸಲಾಯಿತು. ಮಮತಾ ಕಿರಣ್ ಬಂಟ್ರಿಂಜ , ಶಾಂತಿ ಪಾಯಸ್ ಸತ್ತಿಕಲ್ಲು, ಚೇತನಾ ಬಾಲ್ತಿಲ ಕಂಠಿಕ, ಶೀಲಾವತಿ ಮಾಣಿ ಅನಿಸಿಕೆ ವ್ಯಕ್ತಪಡಿಸಿದರು. ಸಮಾಲೋಚನಾ ಸಭೆಯಲ್ಲಿ ಮಾಣಿ ಶಾಲೆಯ ಮುಖ್ಯ ಶಿಕ್ಷಕಿ ಚಂದ್ರಾವತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಾಣಿ ವಲಯ ಸಿಆರ್‌ಪಿ ಸತೀಶ್ ಸ್ವಾಗತಿಸಿದರು. ಶಿಕ್ಷಕ ನಾಗೇಶ್ ಮಾಣಿ ವಂದಿಸಿದರು. ಕೆದಿಲ ಸಿಆರ್‌ಪಿ ಸುಧಾಕರ ಭಟ್ , ಕಾರ್ಲ ಶಾಲೆಯ ಮುಖ್ಯ ಶಿಕ್ಷಕಿ ಜಾನಕಿ, ಶಿಕ್ಷಣ ಸಂಯೋಜಕಿ ಪ್ರತಿಮಾ ವೈ. ಶುಭ ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು