12:59 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಜ್ಞಾನಪೀಠ ಪ್ರಶಸ್ತಿ ವಿಜೇತ ಕೊಂಕಣಿ ಸಾಹಿತಿ ದಾಮೋದರ ಮೌಜೊ ಮಾರ್ಚ್ 19ರಂದು ಮಂಗಳೂರಿಗೆ

11/03/2022, 12:31

ಮಂಗಳೂರು(reporterkarnataka.com):

ಜ್ಞಾನಪೀಠ ಪ್ರಶಸ್ತಿ ಘೋಷಿತ ಕೊಂಕಣಿ ಲೇಖಕ ದಾಮೋದರ ಮೌಜೊ ಮಾರ್ಚ್ 19ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.

ವಿಶ್ವ ಕೊಂಕಣಿ ಕೇಂದ್ರದಲ್ಲಿ ಮಾರ್ಚ್ 20 ರಂದು ಪೂರ್ವಾಹ್ನ 10 ಗಂಟೆಗೆ ನಡೆಯಲಿರುವ 

ವಿಮಲಾ ವಿ. ಪೈ ವಿಶ್ವ ಕೊಂಕಣಿ ಸಾಹಿತ್ಯ ಪುರಸ್ಕಾರ ಮತ್ತು ಬಸ್ತಿ ವಾಮನ ಶೆಣೈ ವಿಶ್ವ ಕೊಂಕಣಿ ಸೇವಾ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅಭಿನಂದನಾ ಭಾಷಣವನ್ನು ನೀಡಲಿದ್ದಾರೆ.

19ರಂದು ವಿಶ್ವ ಕೊಂಕಣಿ ಕೇಂದ್ರ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿಯ ಜಂಟಿ ಆಯೋಜನೆಯಲ್ಲಿ ಜರಗಲಿರುವ “ಬಸ್ತಿ ವಾಮನ ಶೆಣೈ – ಜೀವನ ಮತ್ತು ಕಾರ್ಯ” ಕುರಿತಾದ ಸಿಂಪೊಸಿಯಮ್ ನಲ್ಲಿ ಮುಖ್ಯ ಅತಿಥಿಯಾಗಿ ಆಹ್ವಾನಿತರಾಗಿರುವ

ದಾಮೋದರ ಮೌಜೊ ಆ ಬಳಿಕ ವಿಶ್ವ ಕೊಂಕಣಿ ಕೇಂದ್ರ ಮತ್ತು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಜಂಟಿ ಆಯೋಜನೆಯಲ್ಲಿ ಜರಗಲಿರುವ ವಿಶ್ವ ಕೊಂಕಣಿ ಸಮಾರೋಪ (ಕೊಂಕಣಿ ಲಿಟ್ ಫೆಸ್ಟ್) ದಲ್ಲಿ “ಕೊಂಕಣಿ ಸಾಹಿತ್ಯ: ಜ್ಞಾನಪೀಠ ಮತ್ತು ಮುಂದಿನ ಹಾದಿ” ಕುರಿತಾಗಿ ನಡೆಯಲಿರುವ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಲಿರುವರು. ಕೊಂಕಣಿ ಸಾಹಿತಿ ಹೆಚ್. ಎಂ. ಪೆರ್ನಾಲ್ ಈ ಸಂವಾದ ಕಾರ್ಯಕ್ರಮವನ್ನು ನಡೆಸಿಕೊಡಲಿರುವರು.

ಗೋವಾದ ಮಜೋರ್ಡಾದಲ್ಲಿ ವಾಸವಾಗಿರುವ 

ಮೌಜೊ ಕೊಂಕಣಿಯ ಪ್ರಸಿದ್ಧ ಕಾದಂಬರಿಕಾರರಾಗಿದ್ದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು ವಿಮಲಾ ವಿ. ಪೈ ವಿಶ್ವ ಕೊಂಕಣಿ ಸಾಹಿತ್ಯ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದಾರೆ. ಗೋವಾ ವಿಮೋಚನೆ, ಅಧಿಕೃತ ರಾಜ್ಯಭಾಷೆ, ಸಂವಿಧಾನದ ೮ನೇ ಪರಿಚ್ಛೇದದಲ್ಲಿ ಕೊಂಕಣಿ, ಶಾಲಾ ಶಿಕ್ಷಣದಲ್ಲಿ ಕೊಂಕಣಿ ಮೊದಲಾದ ಅನೇಕ ಹೋರಾಟಗಳಲ್ಲಿ ಮಹತ್ವದ ಪಾತ್ರವನ್ನು ವಹಿಸಿರುವ ಮೌಜೊರವರ ಕಾದಂಬರಿಗಳು ಅನೇಕ ಭಾಷೆಗಳಿಗೆ ಅನುವಾದಗೊಂಡು ಪ್ರಸಿದ್ಧವಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು