11:10 AM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

Job Alert : 10ನೇ ಪಾಸ್ ಆದವರಿಗೆ ಅಂಚೆ ಇಲಾಖೆಯಲ್ಲಿದೆ ವಿವಿಧ ಹುದ್ದೆಗಳು: ಜುಲೈ 30ಕ್ಕೆ ನೇರಸಂದರ್ಶನ

28/07/2021, 19:13

ಉಡುಪಿ(Reporterkarnataka.com)

ಭಾರತೀಯ ಅಂಚೆ ಇಲಾಖೆಯ ವತಿಯಿಂದ ನಗರ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವವಿಮೆ ಹಾಗೂ ಗ್ರಾಮೀಣ ಅಂಚೆ ಜೀವವಿಮೆ ಏಜೆಂಟ್ ಆಗಿ ಕಾರ್ಯ ನಿರ್ವಹಿಸಲು ಕನಿಷ್ಠ 18ರಿಂದ 50 ವರ್ಷದೊಳಗಿನ ಎಸೆಸೆಲ್ಸಿ ತೇರ್ಗಡೆಗೊಂಡ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಆಧಾರ್‌ ಕಾರ್ಡ್, ಪಾನ್‌ಕಾರ್ಡ್, ಎಸೆಸೆಲ್ಸಿ ಅಂಕಪಟ್ಟಿ ಮೂಲ ಪ್ರತಿ, ಝೆರಾಕ್ಸ್ ಪ್ರತಿ ಮತ್ತು ಎರಡು ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಜುಲೈ 30ರಂದು ಬೆಳಗ್ಗೆ 10 ಗಂಟೆಗೆ ನಡೆಯುವ ಸಂದರ್ಶನಕ್ಕೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಳಿಗಾಗಿ ದೂರವಾಣಿ ಸಂಖ್ಯೆ: 0820-2520471 ಅಥವಾ ಮೊ.ನಂ: 9448291071 ಅನ್ನು ಸಂಪರ್ಕಿಸುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು