4:21 AM Thursday26 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಜಾಬ್ ಗಾಗಿ ಕಾಲೇಜಿಗೆ ಬನ್ನಿ, ಹಿಜಾಬ್, ಟೋಪಿ ಹಾಕಿಕೊಂಡು ಮದ್ರಸಾಗೆ ಹೋಗಿ: ಸಂಸದ ಪ್ರತಾಪ್‌ ಸಿಂಹ

05/02/2022, 18:01

ಮೈಸೂರು(reporterkarnataka.com): ಎಲ್ಲರೂ ಕಾಲೇಜಿಗೆ ‘ಜಾಬ್’ ಗಾಗಿ ಬರುತ್ತಾರೆ, ಆದರೆ ನೀವು ‘ಹಿಜಾಬ್’ ಗಾಗಿ ಬರುತ್ತೀದ್ದೀರಾ? ಹಿಜಾಬ್ ಹಾಕಿಕೊಂಡು, ಟೋಪಿ ಹಾಕಿಕೊಂಡು ನೀವು ಕಲಿಯಬೇಕು ಎಂಬುದಾದರೆ ಮದರಸಗೆ ಹೋಗಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

ಮಾಧ್ಯಮದ ಜತೆ ಮಾತನಾಡಿದ ಅವರು, ಎಲ್ಲ ತರಹದ ಒತ್ತಡ, ಟೀಕಾ ಪ್ರಹಾರದ ನಡುವೆಯೂ ಸಮವಸ್ತ್ರ ಕಡ್ಡಾಯಕ್ಕೆ ಸರಕಾರ ಬದ್ಧವಾಗಿರುವುದು ಒಳ್ಳೆಯ ಸಂದೇಶ. ಹಿಜಾಬ್ ಗಾಗಿ ಇಷ್ಟು ಹಠ ಹಿಡಿದು ಯಾಕಾಗಿ ವಿದ್ಯಾರ್ಥಿಗಳು ಕೂತಿದ್ದಾರೆ. ಸಮವಸ್ತ್ರ ಎನ್ನುವುದು ಬರೀ ಬಣ್ಣದ ಉಡುಪಲ್ಲ. ಅದು ಎಲ್ಲಾ ಮಕ್ಕಳು ಸಮಾನರು ಎಂದು ಸಾರುವ ಉಡುಪು. ಮದರಸದಲ್ಲಿ ನಿಮ್ಮ ಪ್ರತ್ಯೇಕ ಭಾವನೆ ಕಾಪಾಡಿಕೊಳ್ಳಬಹುದು. ಆದರೆ ಸರ್ಕಾರಿ ಶಾಲೆಗಳಲ್ಲಿ ಈ ಪ್ರತ್ಯೇಕತೆ ಸಾಧ್ಯವಿಲ್ಲ. ಇದು ಬ್ರಿಟಿಷರ ಭಾರತವಲ್ಲ, ಇದು ಭರತ ಖಂಡ ಎಂದರು.

ಹಿಂದೂ ಧರ್ಮದ ಬುನಾದಿ ಮೇಲಿರುವ ದೇಶವಿದು. ಇಲ್ಲಿ ಗಣಪತಿ ಪೂಜೆ, ಹೆಣ್ಣು ಮಕ್ಕಳ ಕುಂಕುಮ ಸಂಸ್ಕೃತಿಯ ಭಾಗ. ಇದನ್ನು ಯಾರು ಪ್ರಶ್ನಿಸುವಂತಿಲ್ಲ. ಇಸ್ಲಾಂ- ಕ್ರಿಶ್ಚಿಯನ್ ಮರುಭೂಮಿಯಲ್ಲಿ ಹುಟ್ಟಿ ನೆಲೆಗಾಗಿ ಹುಡುಕಿಕೊಂಡು ಇಲ್ಲಿಗೆ ಬಂದಿವೆ. ಇಲ್ಲಿಗೆ ಬಂದ ಮೇಲೆ ಹಿಂದೂ ಸಂಸ್ಕೃತಿಯನ್ನು ಒಪ್ಪಿಕೊಳ್ಳಬೇಕು. ಕ್ರಿಶ್ಚಿಯನ್, ಇಸ್ಲಾಂ ಧರ್ಮದ ಹೇರಿಕೆ ಇಲ್ಲಿ ನಡೆಯುವುದಿಲ್ಲ. ಈ ನೆಲದ ಸಂಸ್ಕೃತಿಯನ್ನು ಕ್ರಿಶ್ಚಿಯನ್, ಇಸ್ಲಾಂ ಧರ್ಮಗಳು ಒಪ್ಪಿಕೊಳ್ಳಬೇಕು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು