9:38 PM Wednesday13 - May 2026
ಬ್ರೇಕಿಂಗ್ ನ್ಯೂಸ್
ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ… ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಶೇ. 1.50ರಷ್ಟು ಹೆಚ್ಚಳ: ಸರ್ಕಾರದ…

ಇತ್ತೀಚಿನ ಸುದ್ದಿ

ಜೋಕಟ್ಟೆ: ಭಾರೀ ಗಾಳಿ ಮಳೆಗೆ ತಡೆಗೋಡೆ ಕುಸಿದು ಮನೆ ನೆಲಸಮ: ನೆಂಟರಾಗಿ ಬಂದಿದ್ದ ಬಾಲಕ ದಾರುಣ ಸಾವು

25/07/2024, 14:39

ಮಂಗಳೂರು(reporterkarnataka.com): ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಜೋಕಟ್ಟೆ ಬಳಿ ಭಾರೀ ಗಾಳಿ ಮಳೆಗೆ ಮನೆಯ ಮೇಲೆ ತಡೆಗೋಡೆ ಕುಸಿದು 17 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ನಡೆದಿದೆ.
ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿಯಾದ ಶೈಲೇಶ್‌ ಎಂಬಾತ ಜೋಕಟ್ಟೆಯ ಸಂಬಂಧಿಕರ ಮನೆಗೆ ಆಗಮಿಸಿದ್ದ. ಊಟ ಮಾಡಿ ಎಲ್ಲರೂ ಮಲಗಿದ್ದರು. ತಡರಾತ್ರಿ ಭಾರೀ ಮಳೆಯಾಗುತ್ತಿದ್ದಾಗ ಪಕ್ಕದ ತಡೆಗೋಡೆ ಮನೆ ಮೇಲೆ ಕುಸಿದು ಬಿದ್ದಿದ್ದು ಮನೆ ನೆಲಸಮವಾಗಿದೆ. ಮನೆಯಲ್ಲಿ ಮಲಗಿದ್ದವರ ಮೇಲೆ ಮನೆಯ ಹಂಚು ಬಿದ್ದಿದ್ದು ಈ ವೇಳೆ ಶೈಲೇಶ್ ತೀವ್ರ ಗಾಯಗೊಂಡಿದ್ದ. ಅಗ್ನಿ ಶಾಮಕದಳದ సిబ్బంది ಕಾರ್ಯಾಚರಣೆ ನಡೆಸಿ ಬಾಲಕನನ್ನು ಹೊರತೆಗೆದು ಆಸ್ಪತ್ರೆಗೆ ಒಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸಾವನ್ನಪ್ಪಿದ್ದಾರೆ.

ಮನೆಯಲ್ಲಿದ್ದ ಸಂಜೀವ (55), ಸುರೇಶ್ (20), ಸವಿತಾ (19), ಒಂದು ವರ್ಷದ ಮಗು ಸಖಿ ಅವರಿಗೆ ಅಲ್ಪ ಸ್ವಲ್ಪ ಗಾಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು