8:00 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಜೋಕಟ್ಟೆಯ ಬಾಡಿಗೆ ಮನೆಯಲ್ಲಿ ಅಪ್ರಾಪ್ತ ಬಾಲಕಿಯ ಕೊಲೆ ಪ್ರಕರಣ: 24 ತಾಸಿನೊಳಗೆ ಆರೋಪಿ ಬಂಧನ

07/08/2024, 21:23

ಮಂಗಳೂರು(reporterkarnataka.com): ಬಜಪೆ ಸಮೀಪದ ಜೋಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದು 24 ತಾಸು ಕಳೆಯುವುದರೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಪಣಂಬೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಫಕ್ಕೀರಪ್ಪ ಹಣಮಪ್ಪ ಮಾದರ (51) ಎಂದು ಗುರುತಿಸಲಾಗಿದೆ. ಈತ ಕೂಡ ಬೆಳಗಾವಿ ಮೂಲದವನಾಗಿದ್ದಾನೆ. ಬೆಳಗಾವಿಯ ಪರಸಘಡ
ಹಂಚಿನಾಳದ 1085 ಮಾದರ ಓಣಿಯ ನಿವಾಸಿಯಾದ ಈತ ಕಳೆದ 6 ತಿಂಗಳಿನಿಂದ ಜೋಕಟ್ಟೆ ಪರಿಸರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಕೂಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಜೋಕಟ್ಟೆಯ ಬಾಡಿಗೆ ಮನೆಯಲ್ಲಿ ಬಾಲಕಿಯ
ಮೃತದೇಹ ಮಂಗಳವಾರ ಪತ್ತೆಯಾಗಿತ್ತು. ಕುತ್ತಿಗೆಗೆ ಬಟ್ಟೆ ಬಿಗಿದು ಯಾರೋ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು.
ಬೆಳಗಾವಿ ಮೂಲದ ಹನುಮಂತಪ್ಪ ಎಂಬವರ ಮನೆಗೆ 4 ದಿನಗಳ ಹಿಂದೆ ತನ್ನ ತಮ್ಮನ ಮಗಳಾದ 13ರ ಹರೆಯದ ಈ ಬಾಲಕಿಯು ಕೈ ನೋವಿನ ಚಿಕಿತ್ಸೆಗಾಗಿ ಆಗಮಿಸಿ ವಾಸ್ತವ್ಯ ಹೊಂದಿದ್ದಳು.
ಮಂಗಳವಾರ ಬೆಳಗ್ಗೆ ಹನುಮಂತನ ಮನೆಯವರೆಲ್ಲ ಕೆಲಸಕ್ಕೆ ಹೋದಾಗ ಬಾಲಕಿಯ ತಾಯಿ ಪಕ್ಕದ ಮನೆಯವರಿಗೆ ಕರೆ ಮಾಡಿ ಬಾಲಕಿಗೆ ಫೋನ್ ಕೊಡಲು ತಿಳಿಸಿದ್ದರು. ಪಕ್ಕದ ಮನೆಯವರು ಫೋನ್ ಕೊಡಲು ಬಾಲಕಿ ಇದ್ದ ಬಾಡಿಗೆ ಮನೆಗೆ ಹೋದಾಗ ಬಾಲಕಿಯ ಕುತ್ತಿಗೆಗೆ ಬಟ್ಟೆಯಿಂದ ಬಿಗಿದು ಕೊಲೆ ಮಾಡಿರುವ ಹಾಗೆ ಕಾಣಿಸುತ್ತಿದೆ ಎಂದು ಬಾಲಕಿಯ ತಾಯಿಗೆ ತಿಳಿಸಿದ್ದರು. ತಕ್ಷಣ ಮೃತ ಬಾಲಕಿಯ ತಾಯಿ ಹನುಮಂತ ಅವರಿಗೆ ಫೋನ್ ಮಾಡಿ ಬಾಡಿಗೆ ಮನೆಗೆ ಹೋಗುವಂತೆ ಹೇಳಿದ್ದರು. ಹನುಮಂತ ಅವರು ಬಾಡಿಗೆ ಮನೆಗೆ ಬಂದು ನೋಡಿ ಪೊಲೀಸರಿಗೆ ದೂರು ನೀಡಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ
ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಅವರ ಮಾರ್ಗದರ್ಶನದಂತೆ, ಡಿಸಿಪಿ ಸಿದ್ದಾರ್ಥ ಗೋಯಲ್, (ಕಾನೂನು ಮತ್ತು ಸುವ್ಯವಸ್ಥೆ), ಡಿಸಿಪಿ ಬಿ.ಪಿ. ದಿನೇಶ್ ಕುಮಾರ್ (ಅಪರಾಧ ಮತ್ತು ಸಂಚಾರ ವಿಭಾಗ), ಉತ್ತರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ರವೀಶ್ ನಾಯಕ್ (ಪ್ರಭಾರ) ಮತ್ತು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಮನೋಜ್ ಕುಮಾರ್ ನಾಯ್ ರವರ ಮಾರ್ಗದರ್ಶನದಲ್ಲಿ ಪಣಂಬೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮೊಹಮ್ಮದ್ ಸಲೀಂ ಅಬ್ಬಾಸ್, ಪಣಂಬೂರು ಪೊಲೀಸ್ ಠಾಣಾ ಕಾನೂನು ಸುವ್ಯವಸ್ಥೆ ವಿಭಾಗದ ಉಪನಿರೀಕ್ಷಕಿ ಶ್ರೀಕಲಾ ಕೆ.ಟಿ ಹಾಗೂ ಎ.ಎಸ್.ಐ. ಕೃಷ್ಣ, ಬಿ.ಕೆ. ಎಚ್.ಸಿ.ಗಳಾದ ಸತೀಶ್ ಎಮ್ ಆರ್, ಸಯ್ಯದ್ ಇಂತಿಯಾಜ್, ಸಿಪಿಸಿ ಗಳಾದ ಶಶಿಕುಮಾರ್, ರಾಕೇಶ್ ರವರುಗಳು ಈ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು