8:48 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಜೊಲ್ಲೆ ಉದ್ಯೋಗ ಸಮೂಹದಿಂದ ಕೊರೊನಾ ವಾರಿಯರ್ಸ್ ಗಳಿಗೆ ಕೊರೊನಾ ಕಿಟ್ ವಿತರಣೆ

06/06/2021, 08:38

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಕೊರೊನಾ ಪ್ರಕರಣವನ್ನು ವಿದೇಶಿ ಔಷಧಿಗಿಂತ ಸ್ವದೇಶೀ ಔಷಧಿಗಳ ಮೂಲಕ ಪರಿಣಾಮಕಾರಿಯಾಗಿ ಗುಣಪಡಿಸಲಾಗುತ್ತದೆ. ತಾಲೂಕಿನಲ್ಲಿರುವ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಬರುವ ಜನರಿಗೆ ಕೊರೊನಾ ಪರೀಕ್ಷೆ ಮಾಡುವ ಮೂಲಕ ಕೊರೊನಾವನ್ನು  ತಡೆಗಟ್ಟಲು ಸಹಕರಿಯಾಗಬೇಕು. ಈಗಾಗಲೇ 2ನೇ ಅಲೆಯಲ್ಲಿ ಹಲವಾರು ಜನರಿಗೆ ಆದ ತೊಂದರೆ ಆದದನ್ನು ಗಮನಿಸಿ 3ನೇ ಅಲೆಯ ಮುಂಜಾಗ್ರತ ಕ್ರಮವಾಗಿ ತಾಲೂಕಿನಲ್ಲಿ ಆಕ್ಸಿಜನ್ ಉತ್ಪಾದನಾ ಕೇಂದ್ರ ಹಾಗೂ ಸುಮಾರು 400 ಆಕ್ಸಿಜನ್ ಬೆಡ್ ಹೊಂದಿರುವ ಕೋವಿಡ್ ಕೇರ್ ಸೆಂಟರನ್ನು ಪ್ರತಿ ತಾಲೂಕಿನಲ್ಲಿ ನಿರ್ಮಿಸಲಾಗುವುದು.

ಈಗಾಗಲೇ ತಾಲೂಕಿನಲ್ಲಿ ಕೊರೊನಾ ಹತೋಟಿಗೆ ಬಂದದ್ದು, ಇನ್ನು ಸ್ವಲ್ಪ ದಿನಗಳಲ್ಲಿ  ಪೂರ್ಣ ಪ್ರಮಾಣದಲ್ಲಿ ಇಲ್ಲದಂತಾಗುವುದು. 

ಇದೇ ವೇಳೆಯಲ್ಲಿ ಮಾತನಾಡಿದ ಆರ್ ಎಸ್ ಎಸ್ ಮುಖಂಡ ಅರವಿಂದ್ ದೇಶಪಾಂಡೆ ಅವರು ತಾಲೂಕಿನಲ್ಲಿ ಕೊರೊನಾ  ಹತೋಟಿಗೆ ಬರಲು ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ್ ಸವದಿ ಹಾಗೂ ಶಾಸಕರಾದ ಮಹೇಶ್ ಕುಮಟಳ್ಳಿ ಅವರ ಪಾತ್ರ ಬಹುಮುಖ್ಯ ಪಾತ್ರ ವಹಿಸಿದ್ದಾರೆ ಎಂದರು.

 ಚಿಕ್ಕೋಡಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಮಾತನಾಡಿ, ಈಗಾಗಲೇ ಫ್ರಂಟ್ಲೈನ್ ವಾರಿಯರ್ ಗಳಾದ ಪತ್ರಕರ್ತರಿಗೂ ಸಹ ವಿಶೇಷ ಪ್ಯಾಕೇಜ್ ನೀಡಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ. ಆದಷ್ಟು ಬೇಗ ಪತ್ರಕರ್ತರಿಗೂ ಸಹ ಒಂದು ವಿಶೇಷ ಪ್ಯಾಕೇಜ್ ಕೊಡಿಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು