12:20 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅವರಿಗೆ ರವಿ ಬೆಳಗೆರೆ ಪ್ರಶಸ್ತಿ, ಅನು ಅಕ್ಕಗೆ ಸಮಾಜ ಸೇವೆ ರತ್ನ ಪ್ರದಾನ

13/04/2026, 20:55

ರಾಯಚೂರು(reporterkarnataka.com):ಪತ್ರಿಕೋದ್ಯಮದಲ್ಲಿ ಮಾಡಿದ ಅನುಪಮ ಸೇವೆಯನ್ನು ಗುರುತಿಸಿ ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಅವರಿಗೆ ರವಿ ಬೆಳಗೆರೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮಸ್ಕಿಯಲ್ಲಿ ಸಮಾಜ ಸೇವೆಗೆ ಮುಂದಾದ ಗೀತ ಗಾಯನ ಸಮೂಹ ಐದನೇ ವಾರ್ಷಿಕೋತ್ಸವ ಸಂಭ್ರಮಾಚರಣೆ ಮತ್ತು ಸಂಭ್ರಮ ಸಂಸ್ಕೃತಿಕ ವೇದಿಕೆ ಐವತ್ತನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಸಮಾಜದಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು.


ಬೆಂಗಳೂರಿನ ಜ್ಞಾನ ವಿಕಾಸ ಗುರುಕುಲದಲ್ಲಿ ಗೀತ ಗಾಯನ ಸಮೂಹ ಸಂಭ್ರಮ ಸಂಸ್ಕೃತಿಕ ವೇದಿಕೆಯ ಕಾರ್ಯಕ್ರಮವನ್ನು ಜ್ಞಾನ ವಿಕಾಸ ಗುರುಕುಲದಲ್ಲಿ ನಡೆಸಲಾಯಿತು.
ರಾಜ್ಯದ ವಿವಿಧ ಜಿಲ್ಲೆಗಳಿಂದ ಜಾನಪದ ಕಲಾತಂಡಗಳು, ಸಾಹಿತಿಗಳು, ಕವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದ ನಿರ್ದೇಶಕ ಹಾಗೂ ಸಂಸ್ಥಾಪಕ ಅಧ್ಯಕ್ಷ ನಾಗಲಿಂಗ ಮೂರ್ತಿ, ಕೆ. ಆರ್. ಪ್ರಕಾಶ್ ಅವರ ನೇತೃತ್ವದಲ್ಲಿ ಮುಖ್ಯ ಅತಿಥಿಗಳಿಂದ ಕಾರ್ಯಕ್ರಮಕ್ಕೆ ಸಸಿಗೆ ನೀರು ಹಾಕುವುದರ ಮೂಲಕ ಚಾಲನೆ ನೀಡಲಾಯಿತು.
ಕೆಚ್ಚೆದೆಯ ಕನ್ನಡತಿ ಎಂದು ಪ್ರಸಿದ್ಧಿ ಅನು ಅಕ್ಕ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು