2:25 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಜುಲೈ 9 ಮತ್ತು 10: ಬೀದಿ ಬೈಲೂರು ಮಹಾಲಿಂಗೇಶ್ವರ ದೇವಸ್ಥಾನ ಸಾನ್ನಿಧ್ಯ ಸಂಕೋಚ ಹಾಗೂ ಶಿಲಾ ಮೆರವಣಿಗೆ

08/07/2023, 12:17

ಬೈಲೂರು(reporterkarnataka.com): ಬೈಲೂರು ಬೀದಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಪೂರ್ವಭಾವಿಯಾಗಿ ಶ್ರೀ ಮಹಾಲಿಂಗೇಶ್ವರ ದೇವರ
ಸಾನ್ನಿಧ್ಯ ಸಂಕೋಚ ಕಾರ್ಯಕ್ರಮ ಜು.9 ಮತ್ತು 10 ರಂದು ಬ್ರಹ್ಮಶ್ರೀ ಬೈಲೂರು ನರಸಿಂಹ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.
ಧಾರ್ಮಿಕ ಕಾರ್ಯಕ್ರಮಗಳು: ಜು.9 ರಂದು ಸಾಯಂಕಾಲ 5ರಿಂದ ದೇವತಾ ಪ್ರಾರ್ಥನೆ, ಪುಣ್ಯಹವಾಚನ, ಮೂಲಾಲಯದಲ್ಲಿ ವಾಸ್ತು ಪೂಜಾ, ಬಲಿ, ವಾಸ್ತು ಹೋಮ, ಪ್ರಾಕಾರ ಬಲಿ, ಬಾಲಾಲಯದಲ್ಲಿ ಸಪ್ತಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಪೂಜೆ, ಬಲಿ, ವಾಸ್ತು ಹೋಮ, ಪ್ರಾಕಾರ ಬಲಿ ನಡೆಯಲಿದೆ.
ಜು. 10ರಂದು ಬೆಳಿಗ್ಗೆ 5:30ರಿಂದ ಪುಣ್ಯಹವಾಚನ, ಗಣಯಾಗ, ಪಂಚವಿಂಶತಿ, ಕಲಶ ಪ್ರಧಾನ ಹೋಮ, ಸಂಹಾರ ತತ್ವ ಹೋಮ, ಗಣಪತಿ ಸನ್ನಿಧಿಯಲ್ಲಿ ನವಕ ಪ್ರಧಾನ ಕಲಶಾಭಿಷೇಕ, ಪ್ರಸನ್ನ ಪೂಜೆ, 8:30 ಕ್ಕೆ ಸಂಕೋಚ ಕಲಶಾಭಿಷೇಕ ಮಹಾಲಿಂಗೇಶ್ವರ ದೇವರ ಧ್ಯಾನ ಸಂಕೋಚ, ಮಹಾ ಗಣಪತಿ ದೇವರ ಬಿಂಬ ಬಾಲಾಲಯ ಪ್ರತಿಷ್ಠೆ,ಶಿಲಾ ಮುಹೂರ್ತ, ಪ್ರಸಾದ ವಿತರಣೆ ನಡೆಯಲಿದೆ. ಪುಣ್ಯ ಕಾರ್ಯದಲ್ಲಿ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಸ್ಥಾನದ ವ್ಯವಸ್ಥಾಪನ ಸಮಿತಿ, ಜೀಣೋದ್ಧಾರ ಸಮಿತಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇವಾ ಟ್ರಸ್ಟ್ ಮತ್ತು ಗ್ರಾಮಸ್ಥರು ವಿನಂತಿಸಿದ್ದಾರೆ.
ಶಿಲಾ ಮೆರವಣಿಗೆ: ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಶಿಲಾಮುಹೂರ್ತದ ಪೂರ್ವಭಾವಿಯಾಗಿ ಶಿಲಾ ಮೆರವಣಿಗೆಯು ಜು.9 ರಂದು ಬೆಳಿಗ್ಗೆ 9:30ಕ್ಕೆ ಸರಿಯಾಗಿ ಬೈಲೂರು ಕೆಳಪೇಟೆಯಿಂದ ನಡೆಯಲಿದೆ. ಮೆರವಣಿಗೆಯಲ್ಲಿ ಪೂರ್ಣಕುಂಭದೊಂದಿಗೆ ಮಹಿಳೆಯರು, ಭಜನಾ ತಂಡಗಳು, ಕೆರಳ ಚೆಂಡೆ ಹಾಗೂ ಸ್ಥಳೀಯ ಚೆಂಡೆ ತಂಡಗಳು ಪಾಲ್ಗೊಳ್ಳಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು