3:59 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಜುಲೈ 14ರಂದು ಚೆನ್ನೈಯಲ್ಲಿ ವಿಭಾ ಶ್ರೀನಿವಾಸ್ ನಾಯಕ್ ಸಂಗೀತ ಕಾರ್ಯಕ್ರಮ; ಸನ್ಮಾನ

12/07/2024, 20:36

ಮಂಗಳೂರು(reporterkarnataka.com): ಚೆನ್ನೈ ನಗರದ ಸಂಯುಕ್ತ ಗೌಡ ಸಾರಸ್ವತ ಸಭಾ ವತಿಯಿಂದ ಜೆ. ಎಸ್. ಪ್ರಭು ಹಾಗೂ ರಮಾಬಾಯಿ ಪ್ರಭು ಸ್ಮರಣಾರ್ಥ ಸಂಗೀತ ಕಾರ್ಯಕ್ರಮ ಜುಲೈ 14ರಂದು ಸಂಜೆ 6 ಗಂಟೆಯಿಂದ 7.45 ರ ವರೆಗೆ ಚೆನ್ನೈ ಟಿ ನಗರದ ಮ್ಯೂಸಿಕ್ ಹಾಲ್ ನಲ್ಲಿ ನಡೆಯಲಿದೆ.


ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ ಕಲಾವಿದೆ ವಿಭಾ ಶ್ರೀನಿವಾಸ್ ನಾಯಕ್ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಶಿರಸಿಯ ಭರತ್ ಹೆಗ್ಡೆ ಹಾರ್ಮೋನಿಯಂ ಹಾಗೂ ಮೂಡಬಿದಿರೆಯ ವಿಗ್ನೇಶ್ ಪ್ರಭು ತಬಲದಲ್ಲಿ ಸಾಥ್ ನೀಡಲಿದ್ದಾರೆ. ಸಂಯುಕ್ತ ಗೌಡ ಸಾರಸ್ವತ ಸಭಾ ಅಧ್ಯಕ್ಷ ಡಾ. ಎಸ್. ದಿನೇಶ್ ನಾಯಕ್ ಅವರು ಸಂಗೀತ ಕಲಾವಿದರನ್ನು ಸನ್ಮಾನಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು