4:38 AM Tuesday29 - July 2025
ಬ್ರೇಕಿಂಗ್ ನ್ಯೂಸ್
Bangaluru | ಪತ್ರಿಕಾ ಸಂಪಾದಕರ ಕೈಕಟ್ಟಿ ಹಾಕಲಾಗುತ್ತಿದೆ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ… Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ… ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ…

ಇತ್ತೀಚಿನ ಸುದ್ದಿ

ಜುಮಾಲಾಪುರ್: ಸಕಲ ಸರಕಾರಿ ಗೌರವಗಳೊಂದಿಗೆ ಯೋಧ ವೆಂಕಟೇಶ್ ರಾಠೋಡ ಅಂತ್ಯಕ್ರಿಯೆ

14/06/2025, 22:03

ಶಿವು ರಾಠೋಡ ಹುಣಸಗಿ ಬಾಗಲಕೋಟೆ

info.reporterkarnataka@gmail.com

ಬಾಗಲಕೋಟೆ ಕೇರೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಯೋಧ ವೆಂಕಟೇಶ್ ಎಂ. ರಾಠೋಡ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮ ಜುಮಾಲಾಪುರ್ ತಾಂಡದಲ್ಲಿ ನೆರವೇರಿತು.
ಬಾಗಲಕೋಟೆ ಕೇರೋಡಿ ಆಸ್ಪತ್ರೆಯಲ್ಲಿ ಬಿಳಿರಕ್ತ ಕಣಗಳು ಕಡಿಮೆ ಆಗಿರೋದರಿನ ಯೋಧ ಮೃತಪಟ್ಟಿದ್ದರು.


ಮೃತರ ಪಾರ್ಥಿವ ಶರೀರವು ಬಾಗಲಕೋಟ ಆಸ್ಪತ್ರೆಯಿಂದ ಗುರುವಾರ ಮಧ್ಯರಾತ್ರಿ ಬಾಗಲಕೋಟದಿಂದ ಬಂದು ಶುಕ್ರವಾರ ಬೆಳಿಗ್ಗೆ ಜುಮಾಲಾಪುರ್ ತಾಂಡಕ್ಕೆ ತರಲಾಯಿತು. ಅಲ್ಲಿಂದ ರಸ್ತೆ ಮೂಲಕ ಆಂಬುಲೆನ್ಸ್‌ ವಾಹನದ ಮೂಲಕ ತರಲಾಯಿತು. ನಾರಾಯಣಪುರದಿಂದ ಸುಮಾರ 15 ಕಿ.ಮೀ ದೂರವಿರುವ ಯೋಧನ ಸ್ವಗ್ರಾಮ ಜುಮಾಲಾಪುರ್ ತಾಂಡವರೆಗೆ ಪಾರ್ಥಿವ ಶರೀರದ ಮೆರವಣಿಗೆ ಮಾಡಲಾಯಿತು.
ಮೆರವಣಿಗೆ ಉದ್ದಕ್ಕೂ ವೆಂಕಟೇಶ ಅಮರ ರಹೇ, ಬೋಲೊ ಭಾರತ್ ಮಾತಾಕಿ ಜೈ’ ಘೋಷಣೆಗಳು ಮೊಳಗಿದವು. ಮೆರವಣಿಗೆಯಲ್ಲಿ ಮಾಜಿ ಸೈನಿಕರು, ಯುವಕರು, ಗ್ರಾಮಸ್ಥರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
ಮೃತ ಯೋಧನ ಪಾರ್ಥಿವ ಶರೀರ ಕಂಡು ಕುಟುಂಬಸ್ಥರು ಆಕ್ರಂದನ ಮುಗಿಲು ಮುಟ್ಟಿತ್ತು. ಯೋಧನ ಅಗಲಿಕೆಗೆ ಗ್ರಾಮಸ್ಥರು ಕಂಬನಿ ಮಿಡಿದರು.
ಸ್ವಗ್ರಾಮದ ಹೊರವಲಯದಲ್ಲಿ ಸಾರ್ವಜನಿಕರಿಗೆ ಯೋಧನ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಹುಣಸಗಿ ತಶೀಲದಾರರು ಹುಸೇನಾ.ಎ. ಸರ್ಕಾವಾಸ್, ಕೊಡೇಕಲ್ ಉಪ ತಶೀಲದಾರರು ಕಾಲಪ್ಪ ಜಂಜಿಗಡ್ಡಿ. ಗ್ರಾಮ ಆಡಳಿತ ಅಧಿಕಾರಿ ಪರಶುರಾಮ, ಹುಣಸಗಿ ಪೊಲೀಸ್ ಸಿ.ಪಿ.ಐ ರವಿಕುಮಾರ್ , ಕೊಡೇಕಲ್ ಪಿ.ಎಸ್.ಐ ಅಯ್ಯಣ್ಣ ನವರು ಪೊಲೀಸ್ ಬಂದೋಬಸ್ತಾ ನೀಡಿದರು ಜೊತೆಯಲ್ಲಿ
ಮೃತ ಯೋಧನಿಗೆ ಅಂತಿಮ ನಮನ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು