4:58 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಜುಮಾಲಾಪುರ್: ಸಕಲ ಸರಕಾರಿ ಗೌರವಗಳೊಂದಿಗೆ ಯೋಧ ವೆಂಕಟೇಶ್ ರಾಠೋಡ ಅಂತ್ಯಕ್ರಿಯೆ

14/06/2025, 22:03

ಶಿವು ರಾಠೋಡ ಹುಣಸಗಿ ಬಾಗಲಕೋಟೆ

info.reporterkarnataka@gmail.com

ಬಾಗಲಕೋಟೆ ಕೇರೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಯೋಧ ವೆಂಕಟೇಶ್ ಎಂ. ರಾಠೋಡ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮ ಜುಮಾಲಾಪುರ್ ತಾಂಡದಲ್ಲಿ ನೆರವೇರಿತು.
ಬಾಗಲಕೋಟೆ ಕೇರೋಡಿ ಆಸ್ಪತ್ರೆಯಲ್ಲಿ ಬಿಳಿರಕ್ತ ಕಣಗಳು ಕಡಿಮೆ ಆಗಿರೋದರಿನ ಯೋಧ ಮೃತಪಟ್ಟಿದ್ದರು.


ಮೃತರ ಪಾರ್ಥಿವ ಶರೀರವು ಬಾಗಲಕೋಟ ಆಸ್ಪತ್ರೆಯಿಂದ ಗುರುವಾರ ಮಧ್ಯರಾತ್ರಿ ಬಾಗಲಕೋಟದಿಂದ ಬಂದು ಶುಕ್ರವಾರ ಬೆಳಿಗ್ಗೆ ಜುಮಾಲಾಪುರ್ ತಾಂಡಕ್ಕೆ ತರಲಾಯಿತು. ಅಲ್ಲಿಂದ ರಸ್ತೆ ಮೂಲಕ ಆಂಬುಲೆನ್ಸ್‌ ವಾಹನದ ಮೂಲಕ ತರಲಾಯಿತು. ನಾರಾಯಣಪುರದಿಂದ ಸುಮಾರ 15 ಕಿ.ಮೀ ದೂರವಿರುವ ಯೋಧನ ಸ್ವಗ್ರಾಮ ಜುಮಾಲಾಪುರ್ ತಾಂಡವರೆಗೆ ಪಾರ್ಥಿವ ಶರೀರದ ಮೆರವಣಿಗೆ ಮಾಡಲಾಯಿತು.
ಮೆರವಣಿಗೆ ಉದ್ದಕ್ಕೂ ವೆಂಕಟೇಶ ಅಮರ ರಹೇ, ಬೋಲೊ ಭಾರತ್ ಮಾತಾಕಿ ಜೈ’ ಘೋಷಣೆಗಳು ಮೊಳಗಿದವು. ಮೆರವಣಿಗೆಯಲ್ಲಿ ಮಾಜಿ ಸೈನಿಕರು, ಯುವಕರು, ಗ್ರಾಮಸ್ಥರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
ಮೃತ ಯೋಧನ ಪಾರ್ಥಿವ ಶರೀರ ಕಂಡು ಕುಟುಂಬಸ್ಥರು ಆಕ್ರಂದನ ಮುಗಿಲು ಮುಟ್ಟಿತ್ತು. ಯೋಧನ ಅಗಲಿಕೆಗೆ ಗ್ರಾಮಸ್ಥರು ಕಂಬನಿ ಮಿಡಿದರು.
ಸ್ವಗ್ರಾಮದ ಹೊರವಲಯದಲ್ಲಿ ಸಾರ್ವಜನಿಕರಿಗೆ ಯೋಧನ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಹುಣಸಗಿ ತಶೀಲದಾರರು ಹುಸೇನಾ.ಎ. ಸರ್ಕಾವಾಸ್, ಕೊಡೇಕಲ್ ಉಪ ತಶೀಲದಾರರು ಕಾಲಪ್ಪ ಜಂಜಿಗಡ್ಡಿ. ಗ್ರಾಮ ಆಡಳಿತ ಅಧಿಕಾರಿ ಪರಶುರಾಮ, ಹುಣಸಗಿ ಪೊಲೀಸ್ ಸಿ.ಪಿ.ಐ ರವಿಕುಮಾರ್ , ಕೊಡೇಕಲ್ ಪಿ.ಎಸ್.ಐ ಅಯ್ಯಣ್ಣ ನವರು ಪೊಲೀಸ್ ಬಂದೋಬಸ್ತಾ ನೀಡಿದರು ಜೊತೆಯಲ್ಲಿ
ಮೃತ ಯೋಧನಿಗೆ ಅಂತಿಮ ನಮನ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು