8:34 PM Sunday28 - June 2026
ಬ್ರೇಕಿಂಗ್ ನ್ಯೂಸ್
ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು…

ಇತ್ತೀಚಿನ ಸುದ್ದಿ

ಜುಮಾಲಾಪುರ್: ಸಕಲ ಸರಕಾರಿ ಗೌರವಗಳೊಂದಿಗೆ ಯೋಧ ವೆಂಕಟೇಶ್ ರಾಠೋಡ ಅಂತ್ಯಕ್ರಿಯೆ

14/06/2025, 22:03

ಶಿವು ರಾಠೋಡ ಹುಣಸಗಿ ಬಾಗಲಕೋಟೆ

info.reporterkarnataka@gmail.com

ಬಾಗಲಕೋಟೆ ಕೇರೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಯೋಧ ವೆಂಕಟೇಶ್ ಎಂ. ರಾಠೋಡ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮ ಜುಮಾಲಾಪುರ್ ತಾಂಡದಲ್ಲಿ ನೆರವೇರಿತು.
ಬಾಗಲಕೋಟೆ ಕೇರೋಡಿ ಆಸ್ಪತ್ರೆಯಲ್ಲಿ ಬಿಳಿರಕ್ತ ಕಣಗಳು ಕಡಿಮೆ ಆಗಿರೋದರಿನ ಯೋಧ ಮೃತಪಟ್ಟಿದ್ದರು.


ಮೃತರ ಪಾರ್ಥಿವ ಶರೀರವು ಬಾಗಲಕೋಟ ಆಸ್ಪತ್ರೆಯಿಂದ ಗುರುವಾರ ಮಧ್ಯರಾತ್ರಿ ಬಾಗಲಕೋಟದಿಂದ ಬಂದು ಶುಕ್ರವಾರ ಬೆಳಿಗ್ಗೆ ಜುಮಾಲಾಪುರ್ ತಾಂಡಕ್ಕೆ ತರಲಾಯಿತು. ಅಲ್ಲಿಂದ ರಸ್ತೆ ಮೂಲಕ ಆಂಬುಲೆನ್ಸ್‌ ವಾಹನದ ಮೂಲಕ ತರಲಾಯಿತು. ನಾರಾಯಣಪುರದಿಂದ ಸುಮಾರ 15 ಕಿ.ಮೀ ದೂರವಿರುವ ಯೋಧನ ಸ್ವಗ್ರಾಮ ಜುಮಾಲಾಪುರ್ ತಾಂಡವರೆಗೆ ಪಾರ್ಥಿವ ಶರೀರದ ಮೆರವಣಿಗೆ ಮಾಡಲಾಯಿತು.
ಮೆರವಣಿಗೆ ಉದ್ದಕ್ಕೂ ವೆಂಕಟೇಶ ಅಮರ ರಹೇ, ಬೋಲೊ ಭಾರತ್ ಮಾತಾಕಿ ಜೈ’ ಘೋಷಣೆಗಳು ಮೊಳಗಿದವು. ಮೆರವಣಿಗೆಯಲ್ಲಿ ಮಾಜಿ ಸೈನಿಕರು, ಯುವಕರು, ಗ್ರಾಮಸ್ಥರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
ಮೃತ ಯೋಧನ ಪಾರ್ಥಿವ ಶರೀರ ಕಂಡು ಕುಟುಂಬಸ್ಥರು ಆಕ್ರಂದನ ಮುಗಿಲು ಮುಟ್ಟಿತ್ತು. ಯೋಧನ ಅಗಲಿಕೆಗೆ ಗ್ರಾಮಸ್ಥರು ಕಂಬನಿ ಮಿಡಿದರು.
ಸ್ವಗ್ರಾಮದ ಹೊರವಲಯದಲ್ಲಿ ಸಾರ್ವಜನಿಕರಿಗೆ ಯೋಧನ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಹುಣಸಗಿ ತಶೀಲದಾರರು ಹುಸೇನಾ.ಎ. ಸರ್ಕಾವಾಸ್, ಕೊಡೇಕಲ್ ಉಪ ತಶೀಲದಾರರು ಕಾಲಪ್ಪ ಜಂಜಿಗಡ್ಡಿ. ಗ್ರಾಮ ಆಡಳಿತ ಅಧಿಕಾರಿ ಪರಶುರಾಮ, ಹುಣಸಗಿ ಪೊಲೀಸ್ ಸಿ.ಪಿ.ಐ ರವಿಕುಮಾರ್ , ಕೊಡೇಕಲ್ ಪಿ.ಎಸ್.ಐ ಅಯ್ಯಣ್ಣ ನವರು ಪೊಲೀಸ್ ಬಂದೋಬಸ್ತಾ ನೀಡಿದರು ಜೊತೆಯಲ್ಲಿ
ಮೃತ ಯೋಧನಿಗೆ ಅಂತಿಮ ನಮನ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು