1:33 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಜೂ.9ರಿಂದ ರಾಜ್ಯಾದ್ಯಂತ ‘ಪಿಯು ಕಾಲೇಜು’ ಆರಂಭ:  ಮೇ 20ರಿಂದ ಪ್ರಥಮ ಪಿಯು ದಾಖಲಾತಿ

19/05/2022, 08:31

ಬೆಂಗಳೂರು(reporterkarnataka.com): 2022-23ನೇ ಸಾಲಿನ ಪಿಯು ಕಾಲೇಜುಗಳನ್ನು ಜೂನ್ 9ರಿಂದ ಆರಂಭಗೊಳ್ಳಲಿದೆ. ಅಲ್ಲದೇ ಮೇ 20ರಿಂದ ಪ್ರಥಮ ಪಿಯು ದಾಖಲಾತಿ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಜೂನ್ 1ರಿಂದ ದ್ವಿತೀಯ ಪಿಯು ಪ್ರಕ್ರಿಯೆ ಆರಂಭಿಸುವಂತೆ ಪಿಯು ಬೋರ್ಡ್  ತಿಳಿಸಿದೆ.

ಈ ಸಂಬಂಧ 128 ಪುಟಗಳ ಮಾರ್ಗಸೂಚಿಯನ್ನು ಪ್ರಕಟಿಸಿರುವಂತ ಪಿಯು ಬೋರ್ಡ್, 2022-23ನೇ ಸಾಲಿನ ಶೈಕ್ಷಣಿಕ ಅವಧಿ ಜೂನ್ 9 ರಿಂದ ಆರಂಭಗೊಂಡು ಸೆಪ್ಟೆಂಬರ್ 30ರವರೆಗೆ ನಡೆಸುವಂತೆ ತಿಳಿಸಿದೆ.

ಇನ್ನೂ 2ನೇ ಅವಧಿ ಅಕ್ಟೋಬರ್ 13ರಿಂದ ಮಾರ್ಚ್ 31, 2023ರವರೆಗೆ ನಡೆಸಲು ನಿಗದಿ ಪಡಿಸಲಾಗಿದೆ. ಅಲ್ಲದೇ ಜೂನ್.30ರವರೆಗೆ ಪ್ರಥಮ ಮತ್ತು ದ್ವಿತೀಯ ಪಿಯುಸಿಗೆ ದಾಖಲಾತಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ.ಪ್ರಥಮ ಪಿಯುಸಿಗೆ ದಂಡ ಶುಲ್ಕವಿಲ್ಲದೇ ಜೂನ್.15 ಕೊನೆಯ ದಿನವಾಗಿದೆ. ಜೂನ್.1 ರಿಂದ 15ರವರೆಗೆ ದ್ವಿತೀಯ ಪಿಯು ದಾಖಲಾತಿಗೆ ಅವಕಾಶ ನೀಡಲಾಗಿದೆ. ಜೂನ್ 30 ದಂಡ ಶುಲ್ಕದೊಂದಿಗೆ ದಾಖಲಾಗಲು ಕೊನೆಯ ದಿನವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು