11:43 PM Thursday17 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

ಜೂನ್ 9 ರಂದು ದುಬೈ ಯಕ್ಷೋತ್ಸವ: ದಾಶರಥಿ ದರ್ಶನ ಕನ್ನಡ ಪೌರಾಣಿಕ ಯಕ್ಷಗಾನ

07/06/2024, 13:39

ಮಂಗಳೂರು(reporterkarnataka.com): ಯಕ್ಷಗಾನ ಅಭ್ಯಾಸ ಕೇಂದ್ರ ದುಬೈ ಯುಎಇ ವತಿಯಿಂದ ಜೂ. 9 ರಂದು ಮಧ್ಯಾಹ್ನ 2ರಿಂದ ದುಬೈನ ಕರಮ ಶೇಖ್ ರಷೀದ್ ಸಭಾಂಗಣದಲ್ಲಿ ದುಬೈ ಯಕ್ಷೋತ್ಸವ ಆಯೋಜಿಸಲಾಗಿದೆ.
ಯಕ್ಷಗಾನ ಅಭ್ಯಾಸ ಕೇಂದ್ರ, ಯುಎಇಯ ಬಾಲ-ಯುವ- ಪರಿಣತ-ಪ್ರೌಢ ಕಲಾವಿದರಿಂದ ದಾಶರಥಿ ದರ್ಶನ ಪ್ರಸಂಗ ಪ್ರದರ್ಶನಗೊಳ್ಳಲಿದೆ. ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರ ಗಾನಸಾರಥ್ಯ, ಯುವ ಭಾಗವತರಾದ ಭವ್ಯಶ್ರೀ ಹರೀಶ ಕುಲ್ಕುಂದ ಅವರ ಭಾಗವತಿಕೆಯಲ್ಲಿ ಪ್ರಸಂಗ ಮೂಡಿಬರಲಿದೆ. ಹಿಮ್ಮೇಳದಲ್ಲಿ ಸವಿನಯ ನೆಲ್ಲಿತೀರ್ಥ, ಮಯೂರ ನಾಯ್ಗ ಭಾಗವಹಿಸುವರು. ಚಕ್ರತಾಳದಲ್ಲಿ ಭವ್ಯಶ್ರೀ ಅವರ ಪುತ್ರ ಅಗಸ್ತ್ಯ ಕುಲ್ಕುಂದ ಕಾಣಿಸಿಕೊಳ್ಳುವರು. ಜತೆಗೆ ಸ್ಥಳೀಯ ಕಲಾವಿದರು ಹಿಮ್ಮೇಳದಲ್ಲಿ ಇರಲಿದ್ದಾರೆ.
*ಯಕ್ಷ ಶ್ರೀ ರಕ್ಷ ಗೌರವ ಪ್ರಶಸ್ತಿ 2024*
ಈ ಬಾರಿಯ ‘ಯಕ್ಷಶ್ರೀ ರಕ್ಷಾ ಗೌರವ ಪ್ರಶಸ್ತಿ’ಯನ್ನು ಸ್ಥಳೀಯ ಹಿರಿಯ ಕಲಾವಿದ ವೆಂಕಟೇಶ ಶಾಸ್ತ್ರಿ ಪುತ್ತಿಗೆ ಅವರಿಗೆ ಪ್ರದಾನ ಮಾಡಲಾಗುವುದು. ಯಕ್ಷಧ್ರುವ ಪಟ್ಲ ಫೌಂಡೇಶನ್ ಪ್ರಧಾನ ಸಂಚಾಲಕ ಶಶಿಧರ ಶೆಟ್ಟಿ ಬರೋಡ ಮತ್ತು ಯುಎಇ ಯ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಅಭ್ಯಾಸ ಕೇಂದ್ರದ ಸಂಚಾಲಕ ದಿನೇಶ ಶೆಟ್ಟಿ ಕೊಟ್ಟಿಂಜ ಅವರ ನೇತೃತ್ವದಲ್ಲಿ ಗುರುಗಳಾದ ಶೇಖರ್ ಡಿ. ಶೆಟ್ಟಿಗಾರ್ ಕಿನ್ನಿಗೋಳಿ ಮತ್ತು ಶರತ್ ಕುಡ್ಲ ಅವರ ನಿರ್ದೇಶನದಲ್ಲಿ, ಕೇಂದ್ರದ ಎಲ್ಲಾ ಹಿರಿಯ -ಕಿರಿಯ ಕಲಾವಿದರು ಪೂರ್ಣ ಪ್ರಮಾಣದ ಪ್ರದರ್ಶನಕ್ಕೆ ಸರ್ವಸಿದ್ಧತೆಯಲ್ಲಿದ್ದಾರೆ.
ಪ್ರಸಾದನ ಕಲೆಯಲ್ಲಿ ಸಿದ್ಧಹಸ್ತರಾದ ಕಿನ್ನಿಗೋಳಿ ಮೋಹಿನೀ ಕಲಾ ಸಂಪದದ ಕಲಾವಿದರಾದ ಗಂಗಾಧರ ಡಿ. ಶೆಟ್ಟಿಗಾರ್ ಕಿನ್ನಿಗೋಳಿ, ನಿತಿನ್ ಕುಂಪಲ, ಮನೋಜ್ ಶೆಟ್ಟಿಗಾರ್ ಹಳೆಯಂಗಡಿ ಮೊದಲಾದವರು ಈಗಾಗಲೇ ದುಬಾಯಿ ತಲುಪಿ ಭರದ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿಗೆ 0507083537, 0529157825, 0553912535 ಸಂಪರ್ಕಿಸಬಹುದು ಎಂದು ಅಭ್ಯಾಸ ಕೇಂದ್ರದ ಮಾಧ್ಯಮ ಪ್ರಚಾರ ಸಂಯೋಜಕ ಗಿರೀಶ್ ನಾರಾಯಣ್ ಕಾಟಿಪಳ್ಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
———-
ಬಾಕ್ಸ್

ಪೂರ್ವರಂಗದಲ್ಲಿ ಗಣಪತಿ ಕೌತುಕ. ಏಕಕಾಲದಲ್ಲಿ ಮೂರು ರಂಗಸ್ಥಳಗಳಲ್ಲಿ ಪ್ರಸಂಗಾರಂಭ. ವೈಭವಪೂರ್ಣ ವಿಶೇಷ ಸೆಟ್ಟಿಂಗ್ ಗಳು. ನೂತನ ನಾಟ್ಯ ಸಂಯೋಜನೆ-ಸೆಟ್ಟಿಂಗ್ ನಲ್ಲಿ ಸೇತು ಬಂಧನ ದೃಶ್ಯ. ವೇದಿಕೆಯಲ್ಲಿ ಕಾಣಿಸಿಕೊಳ್ಳಲಿರುವ ಪಾತ್ರಗಳ ಸಂಖ್ಯೆ ಒಟ್ಟು 127. ಕುಂಬಳೆ ಪಾರ್ತಿಸುಬ್ಬ, ಜತ್ತಿ ಈಶ್ವರ ಭಟ್, ಕಾಸರಗೋಡು ಸುಬ್ರಾಯ ಪಂಡಿತ, ಎಂ.ಎ.ಹೆಗಡೆ ಶಿರಸಿ, ಬೊಟ್ಟಿಕೆರೆ ಪುರುಷೋತ್ತಮ ಪೂಂಜ, ಹೊಸ್ತೋಟ ಮಂಜುನಾಥ ಭಾಗವತ ಮೊದಲಾದವರು ರಚಿಸಿದ ಪ್ರಸಂಗದ ಹೂರಣದಿಂದ ಕಟ್ಟಿದ ತೋರಣ ದಾಶರಥಿ ದರ್ಶನ.

ಇತ್ತೀಚಿನ ಸುದ್ದಿ

ಜಾಹೀರಾತು