3:34 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಜೂನ್ 9 ರಂದು ದುಬೈ ಯಕ್ಷೋತ್ಸವ: ದಾಶರಥಿ ದರ್ಶನ ಕನ್ನಡ ಪೌರಾಣಿಕ ಯಕ್ಷಗಾನ

07/06/2024, 13:39

ಮಂಗಳೂರು(reporterkarnataka.com): ಯಕ್ಷಗಾನ ಅಭ್ಯಾಸ ಕೇಂದ್ರ ದುಬೈ ಯುಎಇ ವತಿಯಿಂದ ಜೂ. 9 ರಂದು ಮಧ್ಯಾಹ್ನ 2ರಿಂದ ದುಬೈನ ಕರಮ ಶೇಖ್ ರಷೀದ್ ಸಭಾಂಗಣದಲ್ಲಿ ದುಬೈ ಯಕ್ಷೋತ್ಸವ ಆಯೋಜಿಸಲಾಗಿದೆ.
ಯಕ್ಷಗಾನ ಅಭ್ಯಾಸ ಕೇಂದ್ರ, ಯುಎಇಯ ಬಾಲ-ಯುವ- ಪರಿಣತ-ಪ್ರೌಢ ಕಲಾವಿದರಿಂದ ದಾಶರಥಿ ದರ್ಶನ ಪ್ರಸಂಗ ಪ್ರದರ್ಶನಗೊಳ್ಳಲಿದೆ. ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರ ಗಾನಸಾರಥ್ಯ, ಯುವ ಭಾಗವತರಾದ ಭವ್ಯಶ್ರೀ ಹರೀಶ ಕುಲ್ಕುಂದ ಅವರ ಭಾಗವತಿಕೆಯಲ್ಲಿ ಪ್ರಸಂಗ ಮೂಡಿಬರಲಿದೆ. ಹಿಮ್ಮೇಳದಲ್ಲಿ ಸವಿನಯ ನೆಲ್ಲಿತೀರ್ಥ, ಮಯೂರ ನಾಯ್ಗ ಭಾಗವಹಿಸುವರು. ಚಕ್ರತಾಳದಲ್ಲಿ ಭವ್ಯಶ್ರೀ ಅವರ ಪುತ್ರ ಅಗಸ್ತ್ಯ ಕುಲ್ಕುಂದ ಕಾಣಿಸಿಕೊಳ್ಳುವರು. ಜತೆಗೆ ಸ್ಥಳೀಯ ಕಲಾವಿದರು ಹಿಮ್ಮೇಳದಲ್ಲಿ ಇರಲಿದ್ದಾರೆ.
*ಯಕ್ಷ ಶ್ರೀ ರಕ್ಷ ಗೌರವ ಪ್ರಶಸ್ತಿ 2024*
ಈ ಬಾರಿಯ ‘ಯಕ್ಷಶ್ರೀ ರಕ್ಷಾ ಗೌರವ ಪ್ರಶಸ್ತಿ’ಯನ್ನು ಸ್ಥಳೀಯ ಹಿರಿಯ ಕಲಾವಿದ ವೆಂಕಟೇಶ ಶಾಸ್ತ್ರಿ ಪುತ್ತಿಗೆ ಅವರಿಗೆ ಪ್ರದಾನ ಮಾಡಲಾಗುವುದು. ಯಕ್ಷಧ್ರುವ ಪಟ್ಲ ಫೌಂಡೇಶನ್ ಪ್ರಧಾನ ಸಂಚಾಲಕ ಶಶಿಧರ ಶೆಟ್ಟಿ ಬರೋಡ ಮತ್ತು ಯುಎಇ ಯ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಅಭ್ಯಾಸ ಕೇಂದ್ರದ ಸಂಚಾಲಕ ದಿನೇಶ ಶೆಟ್ಟಿ ಕೊಟ್ಟಿಂಜ ಅವರ ನೇತೃತ್ವದಲ್ಲಿ ಗುರುಗಳಾದ ಶೇಖರ್ ಡಿ. ಶೆಟ್ಟಿಗಾರ್ ಕಿನ್ನಿಗೋಳಿ ಮತ್ತು ಶರತ್ ಕುಡ್ಲ ಅವರ ನಿರ್ದೇಶನದಲ್ಲಿ, ಕೇಂದ್ರದ ಎಲ್ಲಾ ಹಿರಿಯ -ಕಿರಿಯ ಕಲಾವಿದರು ಪೂರ್ಣ ಪ್ರಮಾಣದ ಪ್ರದರ್ಶನಕ್ಕೆ ಸರ್ವಸಿದ್ಧತೆಯಲ್ಲಿದ್ದಾರೆ.
ಪ್ರಸಾದನ ಕಲೆಯಲ್ಲಿ ಸಿದ್ಧಹಸ್ತರಾದ ಕಿನ್ನಿಗೋಳಿ ಮೋಹಿನೀ ಕಲಾ ಸಂಪದದ ಕಲಾವಿದರಾದ ಗಂಗಾಧರ ಡಿ. ಶೆಟ್ಟಿಗಾರ್ ಕಿನ್ನಿಗೋಳಿ, ನಿತಿನ್ ಕುಂಪಲ, ಮನೋಜ್ ಶೆಟ್ಟಿಗಾರ್ ಹಳೆಯಂಗಡಿ ಮೊದಲಾದವರು ಈಗಾಗಲೇ ದುಬಾಯಿ ತಲುಪಿ ಭರದ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿಗೆ 0507083537, 0529157825, 0553912535 ಸಂಪರ್ಕಿಸಬಹುದು ಎಂದು ಅಭ್ಯಾಸ ಕೇಂದ್ರದ ಮಾಧ್ಯಮ ಪ್ರಚಾರ ಸಂಯೋಜಕ ಗಿರೀಶ್ ನಾರಾಯಣ್ ಕಾಟಿಪಳ್ಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
———-
ಬಾಕ್ಸ್

ಪೂರ್ವರಂಗದಲ್ಲಿ ಗಣಪತಿ ಕೌತುಕ. ಏಕಕಾಲದಲ್ಲಿ ಮೂರು ರಂಗಸ್ಥಳಗಳಲ್ಲಿ ಪ್ರಸಂಗಾರಂಭ. ವೈಭವಪೂರ್ಣ ವಿಶೇಷ ಸೆಟ್ಟಿಂಗ್ ಗಳು. ನೂತನ ನಾಟ್ಯ ಸಂಯೋಜನೆ-ಸೆಟ್ಟಿಂಗ್ ನಲ್ಲಿ ಸೇತು ಬಂಧನ ದೃಶ್ಯ. ವೇದಿಕೆಯಲ್ಲಿ ಕಾಣಿಸಿಕೊಳ್ಳಲಿರುವ ಪಾತ್ರಗಳ ಸಂಖ್ಯೆ ಒಟ್ಟು 127. ಕುಂಬಳೆ ಪಾರ್ತಿಸುಬ್ಬ, ಜತ್ತಿ ಈಶ್ವರ ಭಟ್, ಕಾಸರಗೋಡು ಸುಬ್ರಾಯ ಪಂಡಿತ, ಎಂ.ಎ.ಹೆಗಡೆ ಶಿರಸಿ, ಬೊಟ್ಟಿಕೆರೆ ಪುರುಷೋತ್ತಮ ಪೂಂಜ, ಹೊಸ್ತೋಟ ಮಂಜುನಾಥ ಭಾಗವತ ಮೊದಲಾದವರು ರಚಿಸಿದ ಪ್ರಸಂಗದ ಹೂರಣದಿಂದ ಕಟ್ಟಿದ ತೋರಣ ದಾಶರಥಿ ದರ್ಶನ.

ಇತ್ತೀಚಿನ ಸುದ್ದಿ

ಜಾಹೀರಾತು