7:36 PM Friday6 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

Just Miss | ಚಿಕ್ಕಮಗಳೂರು: ಆನೆ ದಾಳಿಯಿಂದ ತಪ್ಪಿಸಿಕೊಳ್ಳಲು ಮರವೇರಿ ಪ್ರಾಣ ಉಳಿಸಿಕೊಂಡ ಇಟಿಎಫ್ ಸಿಬ್ಬಂದಿ!

22/02/2025, 10:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡ ಮಲೆನಾಡು ಭಾಗದಲ್ಲಿ ಆನೆ ಹಾವಾಳಿ ಮುಂದುವರೆದಿದ್ದು, ಆನೆ ದಾಳಿಯಿಂದ ಇ.ಟಿ.ಎಫ್. ( ಎಲಿಫೆಂಟ್ ಟಾಸ್ಕ್ ಫೋರ್ಸ್) ಸಿಬ್ಬಂದಿಯೋರ್ವ ಮರಹತ್ತಿ ಜೀವ ಉಳಿಸಿಕೊಂಡಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಸಾಲೂರು ಅರಣ್ಯದಲ್ಲಿ ನಡೆದಿದೆ.


ಎನ್.ಆರ್.ಪುರ ತಾಲೂಕಿನಲ್ಲಿ ಇತ್ತಿಚೆಗೆ ಆನೆ ಹಾವಳಿ ಮಿತಿ ಮೀರಿದೆ. ಕಾಡಾನೆಗಳು ಪ್ರತಿನಿತ್ಯ ಪುಂಡಾಟ ಮೆರೆಯುತ್ತಿದ್ದು, ಮೂರು ತಿಂಗಳಲ್ಲಿ ಇಬ್ಬರು ಆನೆ ದಾಳಿಗೆ ತುತ್ತಾಗಿದ್ದಾರೆ.‌ ಶುಕ್ರವಾರ ಕೂಡ ಕಾಫಿತೋಟಕ್ಕೆ ಬಂದಿದ್ದ ಪುಂಡಾನೆಯೊಂದನ್ನ ಓಡಿಸಲು ಹೋಗಿದ್ದ ಇ.ಟಿ.ಎಫ್. ಸಿಬ್ಬಂದಿ ಮೇಲೆಯೇ ಆನೆಯೊಂದು ಅಟ್ಯಾಕ್ ಮಾಡಲು ಮುಂದಾಗಿದೆ. ಸಾಲೂರು ಗ್ರಾಮಕ್ಕೆ ಎಂಟ್ರಿ ಕೊಟ್ಟಿದ್ದ ಕಾಡಾನೆಯನ್ನು ಓಡಿಸುವ ವೇಳೆ ಆನೆ ಇಟಿಎಫ್ ಸಿಬ್ಬಂದಿಗಳ ಮೇಲೆ ದಾಳಿ ನಡೆಸಲು ಮುಂದಾಗಿದೆ. ತಕ್ಷಣ ಎಚ್ಚೆತ್ತ ಇಟಿಎಫ್ ಸಿಬ್ಬಂದಿಗಳು ಮರವನ್ನೇರಿ ಕುಳಿತು ಜೀವ ಉಳಿಸಿಕೊಂಡಿದ್ದಾರೆ. ಮರವೇರಿ ಕುಳಿತ ನಂತರವೂ ಕಾಡಾನೆ ಮರವನ್ನು ಅಲುಗಾಡಿಸಲು ಮುಂದಾಗಿದ್ದು, ಈ ದೃಶ್ಯವನ್ನು ಮರದ ಮೇಲೆ ಕುಳಿತುಕೊಂಡು ಆನೆ ನಿಗ್ರಹ ದಳದ ಸಿಬ್ಬಂದಿಗಳು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಈ ದೃಶ್ಯ ನೋಡಿದವರ ಮೈ ಜುಮ್ ಎನಿಸುವಂತಿದ್ದು, ಆನೆ ದಾಳಿ ಹಾಗೂ ಹಾವಳಿಯಿಂದ ಕಂಗೆಟ್ಟಿರೋ ಜನ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಆನೆ ಹಾವಳಿಗೆ ಶಾಶ್ವತ ಬ್ರೇಕ್ ಹಾಕಬೇಕೆಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು