10:08 AM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

Just Miss | ಚಿಕ್ಕಮಗಳೂರು: ಆನೆ ದಾಳಿಯಿಂದ ತಪ್ಪಿಸಿಕೊಳ್ಳಲು ಮರವೇರಿ ಪ್ರಾಣ ಉಳಿಸಿಕೊಂಡ ಇಟಿಎಫ್ ಸಿಬ್ಬಂದಿ!

22/02/2025, 10:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡ ಮಲೆನಾಡು ಭಾಗದಲ್ಲಿ ಆನೆ ಹಾವಾಳಿ ಮುಂದುವರೆದಿದ್ದು, ಆನೆ ದಾಳಿಯಿಂದ ಇ.ಟಿ.ಎಫ್. ( ಎಲಿಫೆಂಟ್ ಟಾಸ್ಕ್ ಫೋರ್ಸ್) ಸಿಬ್ಬಂದಿಯೋರ್ವ ಮರಹತ್ತಿ ಜೀವ ಉಳಿಸಿಕೊಂಡಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಸಾಲೂರು ಅರಣ್ಯದಲ್ಲಿ ನಡೆದಿದೆ.


ಎನ್.ಆರ್.ಪುರ ತಾಲೂಕಿನಲ್ಲಿ ಇತ್ತಿಚೆಗೆ ಆನೆ ಹಾವಳಿ ಮಿತಿ ಮೀರಿದೆ. ಕಾಡಾನೆಗಳು ಪ್ರತಿನಿತ್ಯ ಪುಂಡಾಟ ಮೆರೆಯುತ್ತಿದ್ದು, ಮೂರು ತಿಂಗಳಲ್ಲಿ ಇಬ್ಬರು ಆನೆ ದಾಳಿಗೆ ತುತ್ತಾಗಿದ್ದಾರೆ.‌ ಶುಕ್ರವಾರ ಕೂಡ ಕಾಫಿತೋಟಕ್ಕೆ ಬಂದಿದ್ದ ಪುಂಡಾನೆಯೊಂದನ್ನ ಓಡಿಸಲು ಹೋಗಿದ್ದ ಇ.ಟಿ.ಎಫ್. ಸಿಬ್ಬಂದಿ ಮೇಲೆಯೇ ಆನೆಯೊಂದು ಅಟ್ಯಾಕ್ ಮಾಡಲು ಮುಂದಾಗಿದೆ. ಸಾಲೂರು ಗ್ರಾಮಕ್ಕೆ ಎಂಟ್ರಿ ಕೊಟ್ಟಿದ್ದ ಕಾಡಾನೆಯನ್ನು ಓಡಿಸುವ ವೇಳೆ ಆನೆ ಇಟಿಎಫ್ ಸಿಬ್ಬಂದಿಗಳ ಮೇಲೆ ದಾಳಿ ನಡೆಸಲು ಮುಂದಾಗಿದೆ. ತಕ್ಷಣ ಎಚ್ಚೆತ್ತ ಇಟಿಎಫ್ ಸಿಬ್ಬಂದಿಗಳು ಮರವನ್ನೇರಿ ಕುಳಿತು ಜೀವ ಉಳಿಸಿಕೊಂಡಿದ್ದಾರೆ. ಮರವೇರಿ ಕುಳಿತ ನಂತರವೂ ಕಾಡಾನೆ ಮರವನ್ನು ಅಲುಗಾಡಿಸಲು ಮುಂದಾಗಿದ್ದು, ಈ ದೃಶ್ಯವನ್ನು ಮರದ ಮೇಲೆ ಕುಳಿತುಕೊಂಡು ಆನೆ ನಿಗ್ರಹ ದಳದ ಸಿಬ್ಬಂದಿಗಳು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಈ ದೃಶ್ಯ ನೋಡಿದವರ ಮೈ ಜುಮ್ ಎನಿಸುವಂತಿದ್ದು, ಆನೆ ದಾಳಿ ಹಾಗೂ ಹಾವಳಿಯಿಂದ ಕಂಗೆಟ್ಟಿರೋ ಜನ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಆನೆ ಹಾವಳಿಗೆ ಶಾಶ್ವತ ಬ್ರೇಕ್ ಹಾಕಬೇಕೆಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು