11:44 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಜ್ಯೋತಿ ಥಿಯೇಟರ್ ಸಮೀಪ ಬಸ್ ಬೇ ನಿರ್ಮಾಣ: ಟ್ರಾಫಿಕ್ ಜಾಮ್ ತಡೆಗೆ ಕ್ರಮ; ಮೇಯರ್, ಶಾಸಕರಿಂದ ಸ್ಥಳ ಪರಿಶೀಲನೆ

01/07/2021, 18:18

ಮಂಗಳೂರು(reporterkarnataka news):

ನಗರದ ಜ್ಯೋತಿ ಚಲನಚಿತ್ರ ಮಂದಿರದ ಬಳಿ ಬಸ್ ಬೇ ನಿರ್ಮಾಣ ಯೋಜನೆಯ ಅಂಗವಾಗಿ ಶಾಸಕ ವೇದವ್ಯಾಸ್ ಕಾಮತ್ ಹಾಗೂ  ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಅಧಿಕಾರಿಗಳೊಂದಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿದರು. 

ಆ ಬಳಿಕ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ಜ್ಯೋತಿ ಟಾಕೀಸ್ ಬಳಿಯಿಂದ ಬಂಟ್ಸ್ ಹಾಸ್ಟೆಲ್ ಹೋಗುವ ದಾರಿಯಲ್ಲಿ ಬಸ್ ಬೇ ನಿರ್ಮಾಣದ ಯೋಜನೆ ರೂಪಿಸಲಾಗಿದೆ. ಸಾಮಾನ್ಯ ದಿನಗಳಲ್ಲಿ ಈ ರಸ್ತೆಯಲ್ಲಿ ವಾಹನ ದಟ್ಟಣೆಯಿಂದ ಉಂಟಾಗುವ ಟ್ರಾಫಿಕ್ ಜಾಮ್ ಸಮಸ್ಯೆಯನ್ನು ನಿವಾರಿಸಲು ಇದು ಸಹಕಾರಿಯಾಗಿದೆ. ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದಿಂದ ಬಂಟ್ಸ್ ಹಾಸ್ಟೆಲ್ ಮೂಲಕ ಹಾದು ಹೋಗುವ ಬಸ್ ಗಳು ರಸ್ತೆಯಲ್ಲಿಯೇ ನಿಲ್ಲಿಸುವುದರಿಂದ ಈ ಭಾಗದಲ್ಲಿ ವಿಪರೀತ ಟ್ರಾಫಿಕ್ ಜಾಮ್ ಉಂಟಾಗುತಿದ್ದು ಬಸ್ ಬೇ ನಿರ್ಮಾಣವಾದರೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಹೇಳಿದರು‌. 

ಮೇಯರ್ ಪ್ರೇಮಾನಂದ ಶೆಟ್ಟಿ ಮಾತನಾಡಿ, ಬಸ್ ಬೇ ನಿರ್ಮಾಣಕ್ಕಾಗಿ ಜಾಗ ಗುರುತಿಸಲಾಗಿದೆ. ಜ್ಯೋತಿ ಟಾಕೀಸ್ ಪಕ್ಕದಲ್ಲಿ ಬಸ್ ಬೇ ನಿರ್ಮಿಸುವುದರಿಂದ ಇಲ್ಲಿನ ವಾಹನ ದಟ್ಟಣೆ ನಿವಾರಣೆಯಾಗಲಿದೆ ಎಂದು ಹೇಳಿದರು. 

ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಪಾಲಿಕೆ ಮುಖ್ಯ ಸಚೇತಕರಾದ ಸುಧೀರ್ ಶೆಟ್ಟಿ ಕಣ್ಣೂರು, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ವಸಂತ್ ಜೆ ಪೂಜಾರಿ, ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು, ಸ್ಮಾರ್ಟ್ ಸಿಟಿ ಅಧಿಕಾರಿಗಳು, ನಗರ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು