12:59 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕೆ.ಆರ್. ಪೇಟೆ ಬೀರುವಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಅಧ್ಯಕ್ಷರಾಗಿ ಹೇಮಾ ಅವಿರೋಧ ಆಯ್ಕೆ

04/03/2023, 11:27

ಮನು ಮಾಕವಳ್ಳಿ ಕೆ. ಆರ್. ಪೇಟೆ ಮಂಡ್ಯ

info.reporterkarnataka@gmail.com

ಕೆ. ಆರ್. ಪೇಟೆ ತಾಲೂಕಿನ ಬೀರುವಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಹೇಮಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹಿಂದಿನ ಅಧ್ಯಕ್ಷರಾಗಿದ್ದ ಶಶಿಧರ್ ನೀಡಿದ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಹೇಮಾ ಅವರು ಬಿಟ್ಟರೆ ಉಳಿದ ಯಾವ ಸದಸ್ಯರು ನಾಮಪತ್ರ ಸಲ್ಲಿಸದ ಕಾರಣ ಹೇಮಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಘೋಷಿಸಿದರು.

ನೂತನ ಅಧ್ಯಕ್ಷೆ ಅಭಿನಂದಿಸಿ ಮಾತನಾಡಿದ ಬೀರುವಳ್ಳಿ ಸೊಸೈಟಿ ನಿರ್ದೇಶಕ ಲಕ್ಷ್ಮೇಗೌಡ ಮಳೆಯನ್ನೇ ನಂಬಿಕೊಂಡು ವ್ಯವಸಾಯ ಮಾಡುವವರ ಪರಿಸ್ಥಿತಿ ಕಷ್ಟಕರವಾಗಿದೆ.ಈ ಸಂದರ್ಭದಲ್ಲಿ ಹೈನುವಾರಿಕೆ ನೆರವಾಗಲಿದೆ. ಹೈನುಗಾರಿಕೆಯು ಬಹಳ ದೊಡ್ಡ ಉದ್ಯಮವಾಗಿ ಬೆಳೆದು ಲಕ್ಷಾಂತರ ಜನರಿಗೆ ಉದ್ಯೋಗವನ್ನು ಕಲ್ಪಿಸಿದೆ. ಹೈನುಗಾರಿಕೆಯಿಂದ ಆದಾಯ ಕಾಣಬಹುದಾಗಿದೆ.ಈ ಅವಕಾಶ ಬಳಸಿಕೊಳ್ಳಬೇಕು ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ನಿರ್ದೇಶಕರು ಸಂಘದಲ್ಲಿ ರಾಜಕಾರಣ ಬೆರಸದೇ ಪಕ್ಷಾತೀತವಾಗಿ ಪಾಲ್ಗೊಂಡು ಸಂಘದ ಪ್ರಾಮಾಣಿಕವಾಗಿ ಶ್ರಮಿಸಬೇಕೆಂದು ಸಲಹೆ ನೀಡಿದರು.
ಬಳಿಕ ಮಾತನಾಡಿ ನೂತನ ಅಧ್ಯಕ್ಷ ಹೇಮ ನನ್ನನ್ನು ಅವಿರೋಧವಾಗಿ ಅಧ್ಯಕ್ಷರಾಗಲು ಸಹಕರಿಸಿದ ನಮ್ಮ ಗ್ರಾಮದ ಮುಖಂಡರು ಹಾಗೂ ಸಂಘದ ಸದಸ್ಯರೆಲ್ಲರಿಗೂ ತುಂಬು ಹೃದಯದ ಧನ್ಯವಾದಗಳು.ಷೇರುದಾರರು ಸಂಘಕ್ಕೆ ಉತ್ತಮ ಗುಣಮಟ್ಟದ ಹಾಲನ್ನು ಸರಬರಾಜು ಮಾಡಬೇಕು.ಸಂಘವು ಉಳಿದರೆ ನಾವೆಲ್ಲರೂ ಉಳಿದಂತೆ.ಆದ್ದರಿಂದ ನನ್ನ ಆಡಳಿತ ಅವಧಿಯಲ್ಲಿ ಎಲ್ಲರ ಸಹಕಾರದಿಂದ ಸಂಘದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ರೂಪ ಕೃಷ್ಣೆಗೌಡ,ಬಿರುವಳ್ಳಿ ಮುಖಂಡ ಹರೀಶ್,ಅಕ್ಕಿಹೆಬ್ಬಾಳು ಹೋಬಳಿ ಜೆಡಿಎಸ್ ಬಸವಲಿಂಗಪ್ಪ,ಬೀರುವಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಿರೇಗೌಡ, ದೊಡ್ಡೇಗೌಡ, ಪರಶುರಾಮ್, ಸಂಘದ ಉಪಾಧ್ಯಕ್ಷ ಸಾವಿತ್ರಮ್ಮ ನಿರ್ದೇಶಕರುಗಳಾದ ಶಶಿಧರ್ ಬಿ ಜೆ, ಜವರೇಗೌಡ ಬಿ ಸಿ, ಶಿವರಾಮೇಗೌಡ ಬಿ ಎಸ್, ವಿರೂಪಾಕ್ಷಪ್ಪ ಎ ಬಿ, ಬಲ್ಲೇಶ್ ಬಿ ಎಲ್, ಧನಂಜಯ ಬಿ ಎನ್, ರುಕ್ಮಿಣಮ್ಮ, ನೀಲಶೆಟ್ಟಿ, ವಸಂತಮ್ಮ, ದ್ಯಾವನಾಯಕ, ಕಾರ್ಯದರ್ಶಿ ಯೋಗೇಶ್ ಬಿ ಆರ್, ಸಿಬ್ಬಂದಿಗಳಾದ ಯೋಗೇಂದ್ರ, ರಕ್ಷಿತ್, ಸಣ್ಣ ತಾಯಮ್ಮ, ಸೇರಿದಂತೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು