5:27 PM Monday31 - March 2025
ಬ್ರೇಕಿಂಗ್ ನ್ಯೂಸ್
PDO | ಮಾದರಿ ಗ್ರಾಮ ಪಂಚಾಯತಿ ನಿರ್ಮಾಣದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ… Bangalore | ಸಬಲೀಕರಣ ಜತೆಗೆ ಮಹಿಳಾ ಸುರಕ್ಷತೆ: ‘ಬಿ.ಸೇಫ್’ ಸಮೀಕ್ಷಾ ವರದಿ ಬಿಡುಗಡೆ Bangalore | ಬೇಡಿಕೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಬ್ಯಾಂಕ್ ನಿವೃತ್ತರ ಒಕ್ಕೂಟಗಳ… MSIL | ಸರಕಾರಿ, ಖಾಸಗಿ ಉತ್ಪನ್ನಗಳ ಮಾರಾಟ, ಖರೀದಿಗೆ ನೆರವಾಗಲಿದೆ ಇ ಪೋರ್ಟಲ್‌ Chikkamagaluru | ಬಾಲ ಹಿಡಿದು ಎತ್ತಿದ ಉರಗ ತಜ್ಞರು: ನುಂಗಿದ್ದ 10 ಮೊಟ್ಟೆಗಳನ್ನು… Speaker Talking | ವಿಧಾನ ಸೌಧಕ್ಕೆ ವರ್ಣರಂಜಿತ ದೀಪಾಲಂಕಾರ; ಯಾವಾಗ ಉದ್ಘಾಟನೆ?; ಸ್ಪೀಕರ್… ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ: ಹಾಲು ದರ ಏರಿಕೆಗೆ ಕೇಂದ್ರ… ಕೋಲಾರ ಜಿಲ್ಲೆಯಲ್ಲಿ ಸುಮಾರು 10 ಸಾವಿರ ಎಕರೆ ಅರಣ್ಯ ಭೂಮಿ ಒತ್ತುವರಿ; ತೇರಹಳ್ಳಿ… Protest in Delhi | ‘ಉದ್ಯೋಗ ಕೊಡಿ ಅಥವಾ ಅಧಿಕಾರ ತ್ಯಜಿಸಿ’: ಕೇಂದ್ರ… Medical College | ಗದಗ ಮೆಡಿಕಲ್ ಕಾಲೇಜಿಗೆ ಕೆ.ಎಚ್. ಪಾಟೀಲ್ ಹೆಸರು: ರಾಜ್ಯ…

ಇತ್ತೀಚಿನ ಸುದ್ದಿ

ಕಾಡಬೆಟ್ಟು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಗ್ಗ ವಲಯದಿಂದ ಅಟಿದ ಲೇಸ್ ಕಾರ್ಯಕ್ರಮ

17/08/2024, 18:30

ಬಂಟ್ವಾಳ(reporterkarnataka.com): ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ವಗ್ಗ ವಲಯದ ಕಾಡಬೆಟ್ಟು ಒಕ್ಕೂಟದ ವತಿಯಿಂದ ಅಟಿದ ಲೇಸ್ ಕಾರ್ಯಕ್ರಮ ದ. ಕ. ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಕಾಡಬೆಟ್ಟು ವಗ್ಗ ಇಲ್ಲಿ ಜರಗಿತು.
ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ದೀಪ ಬೆಳಗಿಸಿ ಚೆನ್ನೆಮನೆ ಆಟ ಆಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಹಿಂದಿನ ಕಾಲದಲ್ಲಿ ಬಡತನದಿಂದಿದಗದರೂ ಸಂತೋಷದಿಂದ ಜೀವನ ಮಾಡುತ್ತಿದ್ದರು. ಈಗ ಬಡತನದಿಂದ ಹೊರಗಡೆ ಬಂದಿದ್ದಾರೆ. ಆದರೆ ಸಂತೋಷದ, ಆರೋಗ್ಯವಂತ ಜೀವನ ಇಲ್ಲ ಎಂದರು.
ಆಟಿ ತಿಂಗಳ ಮಹತ್ವದ ಬಗ್ಗೆ ಉಪನ್ಯಾಸ ನೀಡಿದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವಗ್ಗದ ಅಧ್ಯಕ್ಷ ಪ್ರಮೋದ್ ಕುಮಾರ್ ರೈ ಕಾಡಬೆಟ್ಟು ಮಾತನಾಡಿ ಹಿಂದಿನ ಆಟಿ ತಿಂಗಳಿಗೂ ಈಗ ಆಟಿ ತಿಂಗಳಿಗೂ ಬಹಳ ವ್ಯತ್ಯಾಸವಿದೆ. ನಮ್ಮ ಪೂರ್ವಿಕರು ಪರಿಸರದಲ್ಲಾಗುವ ಅಸಮತೋಲನದಿಂದಾಗಿ ಬರುವ ರೋಗರುಜಿನಗಳನ್ನು ತಡೆಗಟ್ಟಲು ಪ್ರಕೃತಿದತ್ತವಾದ ಆಹಾರ ಪದ್ಧತಿಗಳನ್ನು ಅನುಸರಿಸುತಿದ್ದರು. ಈಗ ಆರೋಗ್ಯ ಸಮಸ್ಯೆ ಎದುರಾದರೆ ಆಸ್ಪತ್ರೆಗೆ ಭೇಟಿ ನೀಡುವಂತಾಗಿದೆ. ಆಟಿಕೂಟಗಳನ್ನು ಮಾಡಿ ಜನರಿಗೆ ನಮ್ಮ ಆಹಾರ ಪದ್ಧತಿಯ ಮನವರಿಕೆ ಮಾಡುವ ಅವಶ್ಯಕತೆ ಇದೆ ಎಂದರು.
ವೇದಿಕೆಯಲ್ಲಿ ಕಾವಳಪಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ಲಕ್ಷ್ಮೀನಾರಾಯಣ ಶರ್ಮ, ಕಾಡಬೆಟ್ಟು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಗಜಾನನ ಭಟ್, ಕಾಡಬೆಟ್ಟು ಶಾಲಾ ಮುಖ್ಯ ಶಿಕ್ಷಕಿ ಮೋಹಿನಿ ಕುಮಾರಿ ,ಬಂಟ್ವಾಳ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಪ್ರಕಾಶ್, ಕಾಡಬೆಟ್ಟು ಒಕ್ಕೂಟದ ಮಾಜಿ ಅಧ್ಯಕ್ಷ‌ ಚಂದಪ್ಪ ಮೂಲ್ಯ ಉಪಸ್ಥಿತರಿದ್ದರು.
ಕಾಡಬೆಟ್ಟು ಒಕ್ಕೂಟದ ಪದಾಧಿಕಾರಿಗಳು, ಪ್ರಗತಿ ಬಂದು ಸ್ವಸಹಾಯ ಸಂಘದ ಸದಸ್ಯರುಗಳು, ಶೌರ್ಯ ವಿಪತ್ತು ನಿರ್ವಹಣೆ ಘಟಕ ವಗ್ಗದ ಪ್ರತಿನಿಧಿ ಪ್ರವೀಣ್ ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.
ರೇಖಾ ಪಿ. ಪ್ರಾರ್ಥಿಸಿ,, ಲೀಲಾವತಿ ಸ್ವಾಗತಿಸಿ, ತಾರನಾಥ ಶೆಟ್ಟಿ ವಂದಿಸಿ, ಗಣೇಶ್ ಎಸ್ ಶೆಟ್ಟಿ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು