2:11 AM Tuesday14 - April 2026
ಬ್ರೇಕಿಂಗ್ ನ್ಯೂಸ್
Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ

ಇತ್ತೀಚಿನ ಸುದ್ದಿ

ಕಾಡಬೆಟ್ಟು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಗ್ಗ ವಲಯದಿಂದ ಅಟಿದ ಲೇಸ್ ಕಾರ್ಯಕ್ರಮ

17/08/2024, 18:30

ಬಂಟ್ವಾಳ(reporterkarnataka.com): ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ವಗ್ಗ ವಲಯದ ಕಾಡಬೆಟ್ಟು ಒಕ್ಕೂಟದ ವತಿಯಿಂದ ಅಟಿದ ಲೇಸ್ ಕಾರ್ಯಕ್ರಮ ದ. ಕ. ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಕಾಡಬೆಟ್ಟು ವಗ್ಗ ಇಲ್ಲಿ ಜರಗಿತು.
ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ದೀಪ ಬೆಳಗಿಸಿ ಚೆನ್ನೆಮನೆ ಆಟ ಆಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಹಿಂದಿನ ಕಾಲದಲ್ಲಿ ಬಡತನದಿಂದಿದಗದರೂ ಸಂತೋಷದಿಂದ ಜೀವನ ಮಾಡುತ್ತಿದ್ದರು. ಈಗ ಬಡತನದಿಂದ ಹೊರಗಡೆ ಬಂದಿದ್ದಾರೆ. ಆದರೆ ಸಂತೋಷದ, ಆರೋಗ್ಯವಂತ ಜೀವನ ಇಲ್ಲ ಎಂದರು.
ಆಟಿ ತಿಂಗಳ ಮಹತ್ವದ ಬಗ್ಗೆ ಉಪನ್ಯಾಸ ನೀಡಿದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವಗ್ಗದ ಅಧ್ಯಕ್ಷ ಪ್ರಮೋದ್ ಕುಮಾರ್ ರೈ ಕಾಡಬೆಟ್ಟು ಮಾತನಾಡಿ ಹಿಂದಿನ ಆಟಿ ತಿಂಗಳಿಗೂ ಈಗ ಆಟಿ ತಿಂಗಳಿಗೂ ಬಹಳ ವ್ಯತ್ಯಾಸವಿದೆ. ನಮ್ಮ ಪೂರ್ವಿಕರು ಪರಿಸರದಲ್ಲಾಗುವ ಅಸಮತೋಲನದಿಂದಾಗಿ ಬರುವ ರೋಗರುಜಿನಗಳನ್ನು ತಡೆಗಟ್ಟಲು ಪ್ರಕೃತಿದತ್ತವಾದ ಆಹಾರ ಪದ್ಧತಿಗಳನ್ನು ಅನುಸರಿಸುತಿದ್ದರು. ಈಗ ಆರೋಗ್ಯ ಸಮಸ್ಯೆ ಎದುರಾದರೆ ಆಸ್ಪತ್ರೆಗೆ ಭೇಟಿ ನೀಡುವಂತಾಗಿದೆ. ಆಟಿಕೂಟಗಳನ್ನು ಮಾಡಿ ಜನರಿಗೆ ನಮ್ಮ ಆಹಾರ ಪದ್ಧತಿಯ ಮನವರಿಕೆ ಮಾಡುವ ಅವಶ್ಯಕತೆ ಇದೆ ಎಂದರು.
ವೇದಿಕೆಯಲ್ಲಿ ಕಾವಳಪಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ಲಕ್ಷ್ಮೀನಾರಾಯಣ ಶರ್ಮ, ಕಾಡಬೆಟ್ಟು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಗಜಾನನ ಭಟ್, ಕಾಡಬೆಟ್ಟು ಶಾಲಾ ಮುಖ್ಯ ಶಿಕ್ಷಕಿ ಮೋಹಿನಿ ಕುಮಾರಿ ,ಬಂಟ್ವಾಳ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಪ್ರಕಾಶ್, ಕಾಡಬೆಟ್ಟು ಒಕ್ಕೂಟದ ಮಾಜಿ ಅಧ್ಯಕ್ಷ‌ ಚಂದಪ್ಪ ಮೂಲ್ಯ ಉಪಸ್ಥಿತರಿದ್ದರು.
ಕಾಡಬೆಟ್ಟು ಒಕ್ಕೂಟದ ಪದಾಧಿಕಾರಿಗಳು, ಪ್ರಗತಿ ಬಂದು ಸ್ವಸಹಾಯ ಸಂಘದ ಸದಸ್ಯರುಗಳು, ಶೌರ್ಯ ವಿಪತ್ತು ನಿರ್ವಹಣೆ ಘಟಕ ವಗ್ಗದ ಪ್ರತಿನಿಧಿ ಪ್ರವೀಣ್ ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.
ರೇಖಾ ಪಿ. ಪ್ರಾರ್ಥಿಸಿ,, ಲೀಲಾವತಿ ಸ್ವಾಗತಿಸಿ, ತಾರನಾಥ ಶೆಟ್ಟಿ ವಂದಿಸಿ, ಗಣೇಶ್ ಎಸ್ ಶೆಟ್ಟಿ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು