9:47 AM Wednesday16 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕಾಡಬೆಟ್ಟು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಗ್ಗ ವಲಯದಿಂದ ಅಟಿದ ಲೇಸ್ ಕಾರ್ಯಕ್ರಮ

17/08/2024, 18:30

ಬಂಟ್ವಾಳ(reporterkarnataka.com): ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ವಗ್ಗ ವಲಯದ ಕಾಡಬೆಟ್ಟು ಒಕ್ಕೂಟದ ವತಿಯಿಂದ ಅಟಿದ ಲೇಸ್ ಕಾರ್ಯಕ್ರಮ ದ. ಕ. ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಕಾಡಬೆಟ್ಟು ವಗ್ಗ ಇಲ್ಲಿ ಜರಗಿತು.
ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ದೀಪ ಬೆಳಗಿಸಿ ಚೆನ್ನೆಮನೆ ಆಟ ಆಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಹಿಂದಿನ ಕಾಲದಲ್ಲಿ ಬಡತನದಿಂದಿದಗದರೂ ಸಂತೋಷದಿಂದ ಜೀವನ ಮಾಡುತ್ತಿದ್ದರು. ಈಗ ಬಡತನದಿಂದ ಹೊರಗಡೆ ಬಂದಿದ್ದಾರೆ. ಆದರೆ ಸಂತೋಷದ, ಆರೋಗ್ಯವಂತ ಜೀವನ ಇಲ್ಲ ಎಂದರು.
ಆಟಿ ತಿಂಗಳ ಮಹತ್ವದ ಬಗ್ಗೆ ಉಪನ್ಯಾಸ ನೀಡಿದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವಗ್ಗದ ಅಧ್ಯಕ್ಷ ಪ್ರಮೋದ್ ಕುಮಾರ್ ರೈ ಕಾಡಬೆಟ್ಟು ಮಾತನಾಡಿ ಹಿಂದಿನ ಆಟಿ ತಿಂಗಳಿಗೂ ಈಗ ಆಟಿ ತಿಂಗಳಿಗೂ ಬಹಳ ವ್ಯತ್ಯಾಸವಿದೆ. ನಮ್ಮ ಪೂರ್ವಿಕರು ಪರಿಸರದಲ್ಲಾಗುವ ಅಸಮತೋಲನದಿಂದಾಗಿ ಬರುವ ರೋಗರುಜಿನಗಳನ್ನು ತಡೆಗಟ್ಟಲು ಪ್ರಕೃತಿದತ್ತವಾದ ಆಹಾರ ಪದ್ಧತಿಗಳನ್ನು ಅನುಸರಿಸುತಿದ್ದರು. ಈಗ ಆರೋಗ್ಯ ಸಮಸ್ಯೆ ಎದುರಾದರೆ ಆಸ್ಪತ್ರೆಗೆ ಭೇಟಿ ನೀಡುವಂತಾಗಿದೆ. ಆಟಿಕೂಟಗಳನ್ನು ಮಾಡಿ ಜನರಿಗೆ ನಮ್ಮ ಆಹಾರ ಪದ್ಧತಿಯ ಮನವರಿಕೆ ಮಾಡುವ ಅವಶ್ಯಕತೆ ಇದೆ ಎಂದರು.
ವೇದಿಕೆಯಲ್ಲಿ ಕಾವಳಪಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ಲಕ್ಷ್ಮೀನಾರಾಯಣ ಶರ್ಮ, ಕಾಡಬೆಟ್ಟು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಗಜಾನನ ಭಟ್, ಕಾಡಬೆಟ್ಟು ಶಾಲಾ ಮುಖ್ಯ ಶಿಕ್ಷಕಿ ಮೋಹಿನಿ ಕುಮಾರಿ ,ಬಂಟ್ವಾಳ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಪ್ರಕಾಶ್, ಕಾಡಬೆಟ್ಟು ಒಕ್ಕೂಟದ ಮಾಜಿ ಅಧ್ಯಕ್ಷ‌ ಚಂದಪ್ಪ ಮೂಲ್ಯ ಉಪಸ್ಥಿತರಿದ್ದರು.
ಕಾಡಬೆಟ್ಟು ಒಕ್ಕೂಟದ ಪದಾಧಿಕಾರಿಗಳು, ಪ್ರಗತಿ ಬಂದು ಸ್ವಸಹಾಯ ಸಂಘದ ಸದಸ್ಯರುಗಳು, ಶೌರ್ಯ ವಿಪತ್ತು ನಿರ್ವಹಣೆ ಘಟಕ ವಗ್ಗದ ಪ್ರತಿನಿಧಿ ಪ್ರವೀಣ್ ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.
ರೇಖಾ ಪಿ. ಪ್ರಾರ್ಥಿಸಿ,, ಲೀಲಾವತಿ ಸ್ವಾಗತಿಸಿ, ತಾರನಾಥ ಶೆಟ್ಟಿ ವಂದಿಸಿ, ಗಣೇಶ್ ಎಸ್ ಶೆಟ್ಟಿ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು