8:14 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಕಾಡುಕೋಣ ದಾಳಿ: ಯುವ ರೈತ ಗಂಭೀರ ಗಾಯ; ಮಂಗಳೂರು ಆಸ್ಪತ್ರೆಗೆ ದಾಖಲು

10/04/2024, 20:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೃಷಿಕರೊಬ್ಬರ ಮೇಲೆ ಕಾಡುಕೋಣ ದಾಳಿ ನಡೆಸಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿ, ದುರ್ಗದಹಳ್ಳಿ ಸಮೀಪ ಮಂಗಳವಾರ ಸಂಜೆ ನಡೆದಿದೆ.


ದುರ್ಗದಹಳ್ಳಿ ಗ್ರಾಮದ ಹಲಗಡ್ಕ ನಿವಾಸಿ ರಾಜೇಶ್ ಕಾಡುಕೋಣದಿಂದ ದಾಳಿಗೊಳಗಾದ ರೈತ. ಮಂಗಳವಾರ ಸಂಜೆ ತನ್ನ ಜಮೀನಿನಲ್ಲಿ ಇದ್ದಾಗ ಕಾಡುಕೋಣವೊಂದು ರಾಜೇಶ್ ಮೇಲೆ ದಾಳಿ ನಡೆಸಿದ್ದು, ಕಾಡುಕೋಣ ದಾಳಿಯಿಂದ ರಾಜೇಶ್ ತೀವ್ರವಾಗಿ ಗಾಯಗೊಂಡಿದ್ದಾರೆ. ಕಾಡುಕೋಣದ ತಿವಿತದಿಂದ ರಾಜೇಶ್ ಅವರ ತಲೆ, ಹೊಟ್ಟೆ ಮತ್ತು ಕಾಲಿನ ಭಾಗಕ್ಕೆ ತೀವ್ರವಾಗ ಪೆಟ್ಟಾಗಿದೆ. ತಲೆ ಮತ್ತು ಹೊಟ್ಟೆ ಭಾಗದಲ್ಲಿ ಆಳವಾದ ಗಾಯಗಳಾಗಿವೆ.
ಕಾಡುಕೋಣ ರಾಜೇಶ್ ಅವರನ್ನು ತನ್ನ ಕೊಂಬಿನ ಮೇಲಿರಿಸಿ ಸುಮಾರು ದೂರ ಎಳೆದೊಯ್ದಿತ್ತು ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ರಾಜೇಶ್ ಅವರನ್ನು ಸ್ಥಳೀಯರು ಕಳಸ ಆಸ್ಪತ್ರೆಗೆ ಸೇರಿಸಿ ಪ್ರಥಮ ಚಿಕಿತ್ಸೆಯ ನಂತರ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಿಸಲಾಗಿದೆ. ಅಲ್ಲಿ  ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಭಾಗದಲ್ಲಿ ಕಾಡುಕೋಣಗಳ ಹಾವಳಿ ಮಿತಿಮೀರಿದ್ದು, ಕಳೆದ ಕೆಲ ದಿನಗಳ ಹಿಂದೆ ಜಾವಳಿ ಸಮೀಪದ ಮೂವರ ಮೇಲೆ ಕಾಡುಕೋಣಗಳು ದಾಳಿ ನಡೆಸಿ ಗಾಯಗೊಳಿಸಿದ್ದವು. ಕಾಡುಕೋಣಗಳ ಹಾವಳಿಯಿಂದಾಗಿ ಜನರು ಕಾರ್ಮಿಕರು ತಮ್ಮ ಜಮೀನುಗಳಿಗೆ ಹೋಗಲು ಭಯಪಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು