2:46 AM Saturday5 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಖಾಕಿ ಹಿಂದಿನ‌ ಸಹೋದರತೆ!: ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ಸಲ್ಲಿಸಿದ ಬಾಳೆಹೊನ್ನೂರು ಪಿಎಸ್ಐ ರವೀಶ್ !!; ಅರಿಶಿನ-ಕುಂಕುಮ ಜತೆ ಸೀರೆ ಗಿಫ್ಟ್!!!

09/09/2024, 14:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಒಂದೆಡೆ ಸಬ್ ಇನ್ಸ್ ಪೆಕ್ಟರ್ ರಿಂದಲೇ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿ ಸುದ್ದಿ ಮಾಡಿದ್ದರೆ, ಇಲ್ಲೊಬ್ಬರು ಸಬ್ ಇನ್ಸ್ ಪೆಕ್ಟರ್ ತಮ್ಮ ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ನೀಡಿ ಸೋದರತ್ವ ಮೆರೆದಿದ್ದಾರೆ. ಇದರೊಂದಿಗೆ ಚಿಕ್ಕಮಗಳೂರು ಜಿಲ್ಲೆ ಎರಡು ಬಗೆಯ ಪೊಲೀಸರಿಗೆ ಸಾಕ್ಷಿಯಾಗಿದೆ.
ಕಾಫಿನಾಡಿನ ಬಾಳೆಹೊನ್ನೂರು ಪಿಎಸ್ಐ ರವೀಶ್ ಅವರು ಗಣೇಶ ಚೌತಿಯ ಅಂಗವಾಗಿ ನಾಲ್ವರು ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ಸಲ್ಲಿಸಿದ್ದಾರೆ. ಸಬ್ ಇನ್ಸ್ ಪೆಕ್ಟರ್ ಮಹಿಳಾ ಸಿಬ್ಬಂದಿಗೆ ಬಾಗಿನ ನೀಡಿ ಸೋದರತ್ವ ಭಾವನೆ ಮೆರೆದಿದ್ದಾರೆ.


ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಿಎಸ್ಐ ಬಸವರಾಜ್ ವಿರುದ್ಧ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ಆರೋಪವಿದೆ. ಆದರೆ ಇದಕ್ಕೆ ವಿರುದ್ಧವಾಗಿ ಬಾಳೆಹೊನ್ನೂರು ಪಿಎಸ್ಐ ರವೀಶ್ ರಿಂದ ನಾಲ್ವರು ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ಸಲ್ಲಿಕೆ ಮಾಡಿ ಅವರನ್ನು ತನ್ನ ಸಹೋದರಿಯರಾಗಿ ಪರಿಗಣಿಸಿದ್ದಾರೆ. ಮಹಿಳಾ ಸಿಬ್ಬಂದಿಗಳಿಗೆ ಅರಿಶಿನ-ಕುಂಕುಮ, ಹಣ್ಣು-ಕಾಯಿ, ಬಳೆ, ಸೀರೆ, ಸ್ವಿಟ್ಸ್ ಕೊಟ್ಟು ಗೌರವಿಸಿದ್ದಾರೆ.
ಗೌರಿ-ಗಣೇಶ ಹಬ್ಬದಂದು ಸಹೋದರರು ಅಕ್ಕ-ತಂಗಿಯರಿಗೆ ಬಾಗಿನ ನೀಡುತ್ತಾರೆ.
ನಮ್ಮ ಠಾಣೆಯ ಮಹಿಳಾ ಸಿಬ್ಬಂದಿಗಳು ನಮ್ಮ ಸಹೋದರಿಯರು ಎಂದು ಬಾಗಿನ ಕೊಟ್ಟ ಪಿಎಸ್ಐ ರವೀಶ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು