1:14 PM Wednesday25 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಖಾಕಿ ಹಿಂದಿನ‌ ಸಹೋದರತೆ!: ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ಸಲ್ಲಿಸಿದ ಬಾಳೆಹೊನ್ನೂರು ಪಿಎಸ್ಐ ರವೀಶ್ !!; ಅರಿಶಿನ-ಕುಂಕುಮ ಜತೆ ಸೀರೆ ಗಿಫ್ಟ್!!!

09/09/2024, 14:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಒಂದೆಡೆ ಸಬ್ ಇನ್ಸ್ ಪೆಕ್ಟರ್ ರಿಂದಲೇ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿ ಸುದ್ದಿ ಮಾಡಿದ್ದರೆ, ಇಲ್ಲೊಬ್ಬರು ಸಬ್ ಇನ್ಸ್ ಪೆಕ್ಟರ್ ತಮ್ಮ ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ನೀಡಿ ಸೋದರತ್ವ ಮೆರೆದಿದ್ದಾರೆ. ಇದರೊಂದಿಗೆ ಚಿಕ್ಕಮಗಳೂರು ಜಿಲ್ಲೆ ಎರಡು ಬಗೆಯ ಪೊಲೀಸರಿಗೆ ಸಾಕ್ಷಿಯಾಗಿದೆ.
ಕಾಫಿನಾಡಿನ ಬಾಳೆಹೊನ್ನೂರು ಪಿಎಸ್ಐ ರವೀಶ್ ಅವರು ಗಣೇಶ ಚೌತಿಯ ಅಂಗವಾಗಿ ನಾಲ್ವರು ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ಸಲ್ಲಿಸಿದ್ದಾರೆ. ಸಬ್ ಇನ್ಸ್ ಪೆಕ್ಟರ್ ಮಹಿಳಾ ಸಿಬ್ಬಂದಿಗೆ ಬಾಗಿನ ನೀಡಿ ಸೋದರತ್ವ ಭಾವನೆ ಮೆರೆದಿದ್ದಾರೆ.


ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಿಎಸ್ಐ ಬಸವರಾಜ್ ವಿರುದ್ಧ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ಆರೋಪವಿದೆ. ಆದರೆ ಇದಕ್ಕೆ ವಿರುದ್ಧವಾಗಿ ಬಾಳೆಹೊನ್ನೂರು ಪಿಎಸ್ಐ ರವೀಶ್ ರಿಂದ ನಾಲ್ವರು ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ಸಲ್ಲಿಕೆ ಮಾಡಿ ಅವರನ್ನು ತನ್ನ ಸಹೋದರಿಯರಾಗಿ ಪರಿಗಣಿಸಿದ್ದಾರೆ. ಮಹಿಳಾ ಸಿಬ್ಬಂದಿಗಳಿಗೆ ಅರಿಶಿನ-ಕುಂಕುಮ, ಹಣ್ಣು-ಕಾಯಿ, ಬಳೆ, ಸೀರೆ, ಸ್ವಿಟ್ಸ್ ಕೊಟ್ಟು ಗೌರವಿಸಿದ್ದಾರೆ.
ಗೌರಿ-ಗಣೇಶ ಹಬ್ಬದಂದು ಸಹೋದರರು ಅಕ್ಕ-ತಂಗಿಯರಿಗೆ ಬಾಗಿನ ನೀಡುತ್ತಾರೆ.
ನಮ್ಮ ಠಾಣೆಯ ಮಹಿಳಾ ಸಿಬ್ಬಂದಿಗಳು ನಮ್ಮ ಸಹೋದರಿಯರು ಎಂದು ಬಾಗಿನ ಕೊಟ್ಟ ಪಿಎಸ್ಐ ರವೀಶ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು