12:32 PM Tuesday23 - December 2025
ಬ್ರೇಕಿಂಗ್ ನ್ಯೂಸ್
ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ

ಇತ್ತೀಚಿನ ಸುದ್ದಿ

ಖಾಕಿ ಹಿಂದಿನ‌ ಸಹೋದರತೆ!: ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ಸಲ್ಲಿಸಿದ ಬಾಳೆಹೊನ್ನೂರು ಪಿಎಸ್ಐ ರವೀಶ್ !!; ಅರಿಶಿನ-ಕುಂಕುಮ ಜತೆ ಸೀರೆ ಗಿಫ್ಟ್!!!

09/09/2024, 14:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಒಂದೆಡೆ ಸಬ್ ಇನ್ಸ್ ಪೆಕ್ಟರ್ ರಿಂದಲೇ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿ ಸುದ್ದಿ ಮಾಡಿದ್ದರೆ, ಇಲ್ಲೊಬ್ಬರು ಸಬ್ ಇನ್ಸ್ ಪೆಕ್ಟರ್ ತಮ್ಮ ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ನೀಡಿ ಸೋದರತ್ವ ಮೆರೆದಿದ್ದಾರೆ. ಇದರೊಂದಿಗೆ ಚಿಕ್ಕಮಗಳೂರು ಜಿಲ್ಲೆ ಎರಡು ಬಗೆಯ ಪೊಲೀಸರಿಗೆ ಸಾಕ್ಷಿಯಾಗಿದೆ.
ಕಾಫಿನಾಡಿನ ಬಾಳೆಹೊನ್ನೂರು ಪಿಎಸ್ಐ ರವೀಶ್ ಅವರು ಗಣೇಶ ಚೌತಿಯ ಅಂಗವಾಗಿ ನಾಲ್ವರು ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ಸಲ್ಲಿಸಿದ್ದಾರೆ. ಸಬ್ ಇನ್ಸ್ ಪೆಕ್ಟರ್ ಮಹಿಳಾ ಸಿಬ್ಬಂದಿಗೆ ಬಾಗಿನ ನೀಡಿ ಸೋದರತ್ವ ಭಾವನೆ ಮೆರೆದಿದ್ದಾರೆ.


ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಿಎಸ್ಐ ಬಸವರಾಜ್ ವಿರುದ್ಧ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ಆರೋಪವಿದೆ. ಆದರೆ ಇದಕ್ಕೆ ವಿರುದ್ಧವಾಗಿ ಬಾಳೆಹೊನ್ನೂರು ಪಿಎಸ್ಐ ರವೀಶ್ ರಿಂದ ನಾಲ್ವರು ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ಸಲ್ಲಿಕೆ ಮಾಡಿ ಅವರನ್ನು ತನ್ನ ಸಹೋದರಿಯರಾಗಿ ಪರಿಗಣಿಸಿದ್ದಾರೆ. ಮಹಿಳಾ ಸಿಬ್ಬಂದಿಗಳಿಗೆ ಅರಿಶಿನ-ಕುಂಕುಮ, ಹಣ್ಣು-ಕಾಯಿ, ಬಳೆ, ಸೀರೆ, ಸ್ವಿಟ್ಸ್ ಕೊಟ್ಟು ಗೌರವಿಸಿದ್ದಾರೆ.
ಗೌರಿ-ಗಣೇಶ ಹಬ್ಬದಂದು ಸಹೋದರರು ಅಕ್ಕ-ತಂಗಿಯರಿಗೆ ಬಾಗಿನ ನೀಡುತ್ತಾರೆ.
ನಮ್ಮ ಠಾಣೆಯ ಮಹಿಳಾ ಸಿಬ್ಬಂದಿಗಳು ನಮ್ಮ ಸಹೋದರಿಯರು ಎಂದು ಬಾಗಿನ ಕೊಟ್ಟ ಪಿಎಸ್ಐ ರವೀಶ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು