10:35 AM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಖಾಕಿ ಹಿಂದಿನ‌ ಸಹೋದರತೆ!: ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ಸಲ್ಲಿಸಿದ ಬಾಳೆಹೊನ್ನೂರು ಪಿಎಸ್ಐ ರವೀಶ್ !!; ಅರಿಶಿನ-ಕುಂಕುಮ ಜತೆ ಸೀರೆ ಗಿಫ್ಟ್!!!

09/09/2024, 14:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಒಂದೆಡೆ ಸಬ್ ಇನ್ಸ್ ಪೆಕ್ಟರ್ ರಿಂದಲೇ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿ ಸುದ್ದಿ ಮಾಡಿದ್ದರೆ, ಇಲ್ಲೊಬ್ಬರು ಸಬ್ ಇನ್ಸ್ ಪೆಕ್ಟರ್ ತಮ್ಮ ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ನೀಡಿ ಸೋದರತ್ವ ಮೆರೆದಿದ್ದಾರೆ. ಇದರೊಂದಿಗೆ ಚಿಕ್ಕಮಗಳೂರು ಜಿಲ್ಲೆ ಎರಡು ಬಗೆಯ ಪೊಲೀಸರಿಗೆ ಸಾಕ್ಷಿಯಾಗಿದೆ.
ಕಾಫಿನಾಡಿನ ಬಾಳೆಹೊನ್ನೂರು ಪಿಎಸ್ಐ ರವೀಶ್ ಅವರು ಗಣೇಶ ಚೌತಿಯ ಅಂಗವಾಗಿ ನಾಲ್ವರು ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ಸಲ್ಲಿಸಿದ್ದಾರೆ. ಸಬ್ ಇನ್ಸ್ ಪೆಕ್ಟರ್ ಮಹಿಳಾ ಸಿಬ್ಬಂದಿಗೆ ಬಾಗಿನ ನೀಡಿ ಸೋದರತ್ವ ಭಾವನೆ ಮೆರೆದಿದ್ದಾರೆ.


ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಿಎಸ್ಐ ಬಸವರಾಜ್ ವಿರುದ್ಧ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ಆರೋಪವಿದೆ. ಆದರೆ ಇದಕ್ಕೆ ವಿರುದ್ಧವಾಗಿ ಬಾಳೆಹೊನ್ನೂರು ಪಿಎಸ್ಐ ರವೀಶ್ ರಿಂದ ನಾಲ್ವರು ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ಸಲ್ಲಿಕೆ ಮಾಡಿ ಅವರನ್ನು ತನ್ನ ಸಹೋದರಿಯರಾಗಿ ಪರಿಗಣಿಸಿದ್ದಾರೆ. ಮಹಿಳಾ ಸಿಬ್ಬಂದಿಗಳಿಗೆ ಅರಿಶಿನ-ಕುಂಕುಮ, ಹಣ್ಣು-ಕಾಯಿ, ಬಳೆ, ಸೀರೆ, ಸ್ವಿಟ್ಸ್ ಕೊಟ್ಟು ಗೌರವಿಸಿದ್ದಾರೆ.
ಗೌರಿ-ಗಣೇಶ ಹಬ್ಬದಂದು ಸಹೋದರರು ಅಕ್ಕ-ತಂಗಿಯರಿಗೆ ಬಾಗಿನ ನೀಡುತ್ತಾರೆ.
ನಮ್ಮ ಠಾಣೆಯ ಮಹಿಳಾ ಸಿಬ್ಬಂದಿಗಳು ನಮ್ಮ ಸಹೋದರಿಯರು ಎಂದು ಬಾಗಿನ ಕೊಟ್ಟ ಪಿಎಸ್ಐ ರವೀಶ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು