12:13 AM Sunday10 - May 2026
ಬ್ರೇಕಿಂಗ್ ನ್ಯೂಸ್
ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಇನ್ನಿಲ್ಲ: ಅನಾರೋಗ್ಯದಿಂದ ನಿಧನ ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ

ಇತ್ತೀಚಿನ ಸುದ್ದಿ

ಖಾಕಿ ಹಿಂದಿನ‌ ಸಹೋದರತೆ!: ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ಸಲ್ಲಿಸಿದ ಬಾಳೆಹೊನ್ನೂರು ಪಿಎಸ್ಐ ರವೀಶ್ !!; ಅರಿಶಿನ-ಕುಂಕುಮ ಜತೆ ಸೀರೆ ಗಿಫ್ಟ್!!!

09/09/2024, 14:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಒಂದೆಡೆ ಸಬ್ ಇನ್ಸ್ ಪೆಕ್ಟರ್ ರಿಂದಲೇ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿ ಸುದ್ದಿ ಮಾಡಿದ್ದರೆ, ಇಲ್ಲೊಬ್ಬರು ಸಬ್ ಇನ್ಸ್ ಪೆಕ್ಟರ್ ತಮ್ಮ ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ನೀಡಿ ಸೋದರತ್ವ ಮೆರೆದಿದ್ದಾರೆ. ಇದರೊಂದಿಗೆ ಚಿಕ್ಕಮಗಳೂರು ಜಿಲ್ಲೆ ಎರಡು ಬಗೆಯ ಪೊಲೀಸರಿಗೆ ಸಾಕ್ಷಿಯಾಗಿದೆ.
ಕಾಫಿನಾಡಿನ ಬಾಳೆಹೊನ್ನೂರು ಪಿಎಸ್ಐ ರವೀಶ್ ಅವರು ಗಣೇಶ ಚೌತಿಯ ಅಂಗವಾಗಿ ನಾಲ್ವರು ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ಸಲ್ಲಿಸಿದ್ದಾರೆ. ಸಬ್ ಇನ್ಸ್ ಪೆಕ್ಟರ್ ಮಹಿಳಾ ಸಿಬ್ಬಂದಿಗೆ ಬಾಗಿನ ನೀಡಿ ಸೋದರತ್ವ ಭಾವನೆ ಮೆರೆದಿದ್ದಾರೆ.


ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಿಎಸ್ಐ ಬಸವರಾಜ್ ವಿರುದ್ಧ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ಆರೋಪವಿದೆ. ಆದರೆ ಇದಕ್ಕೆ ವಿರುದ್ಧವಾಗಿ ಬಾಳೆಹೊನ್ನೂರು ಪಿಎಸ್ಐ ರವೀಶ್ ರಿಂದ ನಾಲ್ವರು ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ಸಲ್ಲಿಕೆ ಮಾಡಿ ಅವರನ್ನು ತನ್ನ ಸಹೋದರಿಯರಾಗಿ ಪರಿಗಣಿಸಿದ್ದಾರೆ. ಮಹಿಳಾ ಸಿಬ್ಬಂದಿಗಳಿಗೆ ಅರಿಶಿನ-ಕುಂಕುಮ, ಹಣ್ಣು-ಕಾಯಿ, ಬಳೆ, ಸೀರೆ, ಸ್ವಿಟ್ಸ್ ಕೊಟ್ಟು ಗೌರವಿಸಿದ್ದಾರೆ.
ಗೌರಿ-ಗಣೇಶ ಹಬ್ಬದಂದು ಸಹೋದರರು ಅಕ್ಕ-ತಂಗಿಯರಿಗೆ ಬಾಗಿನ ನೀಡುತ್ತಾರೆ.
ನಮ್ಮ ಠಾಣೆಯ ಮಹಿಳಾ ಸಿಬ್ಬಂದಿಗಳು ನಮ್ಮ ಸಹೋದರಿಯರು ಎಂದು ಬಾಗಿನ ಕೊಟ್ಟ ಪಿಎಸ್ಐ ರವೀಶ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು