4:02 PM Friday11 - April 2025
ಬ್ರೇಕಿಂಗ್ ನ್ಯೂಸ್
ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್…

ಇತ್ತೀಚಿನ ಸುದ್ದಿ

ಕಾರ್ಲ ಕಜೆ, ಕಾರ್ಲ ಬಿಳಿ ಬೆಂಡೆಯನ್ನು ಕಾರ್ಕಳದ ಬ್ರಾಂಡ್ ಆಗಿ ರಾಜ್ಯಮಟ್ಟಕ್ಕೆ ವಿಸ್ತರಣೆ: ಸಚಿವ ಸುನಿಲ್ ಕುಮಾರ್

06/09/2021, 21:46

ಕಾರ್ಕಳ:  ಕಾರ್ಲ ಕಜೆ ಮತ್ತು ಕಾರ್ಲ ಬಿಳಿ ಬೆಂಡೆಯನ್ನು ಕಾರ್ಕಳದ ಬ್ರಾಂಡ್ ಆಗಿ ರಾಜ್ಯ ಮಟ್ಟಕ್ಕೆ ವಿಸ್ತರಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು.

ಇಲ್ಲಿನ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಸೋಮವಾರ ಕಾರ್ಕಳ ವಿಕಾಸ ಕಚೇರಿಯಲ್ಲಿ ಆಯೋಜಿಸಿದ ಬಿಳಿಬೆಂಡೆ ಮೇಳವನ್ನು ಅವರು ಉದ್ಘಾಟಿಸಿ ಮಾತನಾಡಿದರು. 

ಮುಂದಿನ ಅಧಿವೇಶನ ಸಂದರ್ಭದಲ್ಲಿ ಶಾಸಕರಿಗೆ ಊಟದ ವೇಳೆ ಕಾರ್ಕಳ ಬಿಳಿ ಬೆಂಡೆಯ ಖಾದ್ಯವನ್ನು ನೀಡುವ ಮೂಲಕ ರಾಜ್ಯದಾದ್ಯಂತ ಮಾರುಕಟ್ಟೆ ಕಲ್ಪಿಸುವ ಪ್ರಯತ್ನ ಮಾಡಲಾಗುವುದು. ಬಿಳಿ ಬೆಂಡೆಗೆ ಮಾನ್ಯತೆ ಒದಗಿಸುವ ನಿಟ್ಟಿನಲ್ಲಿ ಬೆಂಗಳೂರು ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯ ಮೂಲಕ ಪ್ರಯತ್ನಿಸಲಾಗುತ್ತಿದೆ. ಅಧಿಕೃತ ಮಾನ್ಯತೆ ಲಭಿಸಿದರೆ ರೈತರಿಗೆ ಸಬ್ಸಿಡಿ, ಬೆಂಬಲ ದೊರೆಯುವ ಸಾಧ್ಯತೆಯಿದೆ. ಕಾರ್ಕಳದಲ್ಲಿ ಸುಮಾರು 20 ಸಾವಿರ ಕುಟುಂಬಗಳು ಬಿಳೆ ಬೆಂಡೆ  ಬೆಳೆಸುವ ಮೂಲಕ ಬೆಂಡೆ ಕೃಷಿಗೆ ವಿಶೇಷ ಆದ್ಯತೆ ನೀಡಲಾಗಿದೆ ಎಂದರು.

ರೈತರೇ ಸೂಚಿಸಿರುವ ಕಾರ್ಲ ಕಜೆ, ಬಿಳಿ ಬೆಂಡೆಯನ್ನು ಬ್ರಾಂಡ್ ಮಾಡಲಾಗುತ್ತಿದೆ. ಕಾರ್ಕಳ ಜನತೆ, ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಇವೆರೆಡು ಬೆಳೆ ವ್ಯಾಪಕ ಪ್ರಸಿದ್ಧಿಗೆ ಬರುವಂತಾಗಿದೆ. ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರ ಮತ್ತು ಕಾರ್ಕಳದ ಆಯ್ದ ರೈತರು ಈ ಬಾರಿ ಬಿಳಿ ಬೆಂಡೆ ಬೀಜ ನೀಡಿರುತ್ತಾರೆ. ಮುಂದಿನ ಬಾರಿ ರೈತರು ತಾವಾಗಿಯೇ ಬಿಳಿ ಬೆಂಡೆ ಬೀಜ ಸಂಗ್ರಹಿಸಿ ಬಿತ್ತನೆಗೆ ಸಿದ್ಧರಾಗಬೇಕು. ಮಹಿಳಾ ಮೋರ್ಚಾದ ವತಿಯಿಂದ ಬಿಳಿ ಬೆಂಡೆ ಮೇಳ ಆಯೋಜಿಸುವ ಮೂಲಕ ಬೆಂಡೆಯಿಂದ ಹತ್ತಾರು ಬಗೆಯ ಖಾದ್ಯ ಮಾಡಬಹುದು ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ ಎಂದರು.

ರಾಜ್ಯೋತ್ಸವ ಪ್ರಶಸ್ತಿ ವಿಜೇತ ವಕೀಲ ಎಂ.ಕೆ.ವಿಜಯ ಕುಮಾರ್ ಮಾತನಾಡಿ ಮಧುಮೇಹಿಯಾದ ನನಗೆ ಔಷಧೀಯ ಗುಣವಿರುವ ಬಿಳಿಬೆಂಡೆ ರಕ್ಷಿಸಿದೆ ಎಂದರು. 

ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿನಯ ಡಿ. ಬಂಗೇರ ಸ್ವಾಗತಿಸಿದರು. ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ ಪ್ರಾಸ್ತವಿಕವಾಗಿ ಮಾತನಾಡಿದರು. ಬೆಳ್ಮಣ್ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಮಲ್ಲಿಕಾ ರಾವ್ ನಿರೂಪಿಸಿದರು. ನಿಟ್ಟೆ ಶಕ್ತಿ ಕೇಂದ್ರದ ಅಧ್ಯಕ್ಷೆ ಮಾನಸ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು