10:07 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಕಾಲುಬಾಯಿ ರೋಗ: ಜಾನುವಾರುಗಳ ರಕ್ಷಣೆ ಮಾಡುವಂತೆ ಗೌಳಿಪುರ ಜನ ಆಗ್ರಹ..!; ಪಶು ವೈದ್ಯಾಧಿಕಾರಿಗಳ ನಿರ್ಲಕ್ಷ್ಯ

07/08/2021, 17:58

ಅಮರೇಶ್ ಲಿಂಗಸುಗೂರು ರಾಯಚೂರು

info.reporterkarnataka@gmail.com

ಕೊರೊನಾ ಮಹಾಮಾರಿಯ ನಡುವೆ ಜನರಿಗೆ ಮತ್ತೊಂದು ಏಟು ಬಿದ್ದಿದೆ. ಅದೇನೆಂದರೆ ಜಾನುವಾರುಗಳಿಗೆ ಕಾಲುಬಾಯಿ ರೋಗ . ಲಿಂಗಸುಗೂರು ಪುರಸಭೆ ವ್ಯಾಪ್ತಿಯಲ್ಲಿ ಬರುವ ಗೂಳಿಪೂರದಲ್ಲಿ ಎಮ್ಮೆ ಹಸುಗಳಿಗೆ ಕಾಲುಬಾಯಿ ರೋಗ ಬಂದಿದೆ. ಜಾನುವಾರುಗಳಿ ಕಳೆದ 15 ದಿನಗಳಿಂದ ರೋಗ ಕಾಣಿಸಿಕೊಂಡಿದ್ದು, ಈ ರೋಗ ದಿನೇದಿನೇ  ಹೆಚ್ಚಾಗುತ್ತಿದೆ.ಗೂಳಿಪುರದ ರೈತರು ತಾಲೂಕು ಪಶು ವೈದ್ಯಾಧಿಕಾರಿ ಬಳಿ ತಮ್ಮ ಜಾನುವಾರುಗಳಿಗೆ ಚಿಕಿತ್ಸೆ ನೀಡಿ ರಕ್ಷಣೆ ಮಾಡಿ ಎಂದು ಸುಮಾರು 15 ದಿನಗಳಿಂದ ಅಲೆದಾಡುತ್ತಿದ್ದರೂ ಪ್ರಯೋಜನವಾಗಿಲ್ಲ.

ತಾಲೂಕು ಪಶು ವೈದ್ಯಾಧಿಕಾರಿ ನಮ್ಮತ್ರ ಅದರ ಮೆಡಿಸನ್ ಇಲ್ಲ, ಇಂಜೆಕ್ಷನ್ ಗಳಿಲ್ಲ ಎಂದು ಬೇಜವಾಬ್ದಾರಿ ಹೇಳಿಕೆ ಮಾಡುತ್ತಿರುವುದರಿಂದ ರೈತರಲ್ಲಿ ಆತಂಕ ಉಂಟು ಮಾಡಿದೆ. ದಿನೇದಿನೇ ರೋಗ ಹರಡುವ ಆತಂಕ ಎದುರಾಗಿದೆ. ಸೂಕ್ತ ಕಾಲಕ್ಕೆ ಪಶುಗಳಿಗೆ ಕಾಲು ಬಾಯಿ ರೋಗ ಹರಡದಂತೆ ಪಶು ಸಂಗೋಪನಾ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ರೈತರು ಮಾಧ್ಯಮಗಳ ಮೊರೆ ಹೋಗಿದ್ದಾರೆ. ಆದಷ್ಟು ಬೇಗ ಸಂಬಂಧಪಟ್ಟ ಜಿಲ್ಲಾ, ತಾಲೂಕು ಪಶು ವೈದ್ಯಾಧಿಕಾರಿಗಳು  ತಮ್ಮ ಜಾನುವಾರುಗಳನ್ನು ಚಿಕಿತ್ಸೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಪಶುಸಂಗೋಪನೆ ನಂಬಿಕೊಂಡಿರುವ ರೈತರಿಗೆ ಇದು ಅವರ ಪ್ರಮುಖ ಆದಾಯದ ಮೂಲವಾಗಿದೆ. ಕಾಲುಬಾಯಿ ರೋಗ ಹೈನೋದ್ಯಮಕ್ಕೆ ಪೆಟ್ಟು ನೀಡುವ ಸಾಧ್ಯತೆ ಹೆಚ್ಚಾಗಿದೆ. ಅದಲ್ಲದೆ ಸುಮಾರು 150 ಹೆಚ್ಚು ಎಮ್ಮೆ ಮತ್ತು ಹಸು, ಕುರಿ, ಮೇಕೆಗಳಲ್ಲಿ ರೋಗ ಕಂಡು ಬಂದಿದೆ. ಇನ್ನಾದರೂ ಸಂಬಂಧಪಟ್ಟ ಪಶು ವೈದ್ಯಾಧಿಕಾರಿಗಳು ಎಚ್ಚೆತ್ರುಕೊಳ್ಳುವ ಅಗತ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು