12:13 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕಾಲುಬಾಯಿ ರೋಗ: ಜಾನುವಾರುಗಳ ರಕ್ಷಣೆ ಮಾಡುವಂತೆ ಗೌಳಿಪುರ ಜನ ಆಗ್ರಹ..!; ಪಶು ವೈದ್ಯಾಧಿಕಾರಿಗಳ ನಿರ್ಲಕ್ಷ್ಯ

07/08/2021, 17:58

ಅಮರೇಶ್ ಲಿಂಗಸುಗೂರು ರಾಯಚೂರು

info.reporterkarnataka@gmail.com

ಕೊರೊನಾ ಮಹಾಮಾರಿಯ ನಡುವೆ ಜನರಿಗೆ ಮತ್ತೊಂದು ಏಟು ಬಿದ್ದಿದೆ. ಅದೇನೆಂದರೆ ಜಾನುವಾರುಗಳಿಗೆ ಕಾಲುಬಾಯಿ ರೋಗ . ಲಿಂಗಸುಗೂರು ಪುರಸಭೆ ವ್ಯಾಪ್ತಿಯಲ್ಲಿ ಬರುವ ಗೂಳಿಪೂರದಲ್ಲಿ ಎಮ್ಮೆ ಹಸುಗಳಿಗೆ ಕಾಲುಬಾಯಿ ರೋಗ ಬಂದಿದೆ. ಜಾನುವಾರುಗಳಿ ಕಳೆದ 15 ದಿನಗಳಿಂದ ರೋಗ ಕಾಣಿಸಿಕೊಂಡಿದ್ದು, ಈ ರೋಗ ದಿನೇದಿನೇ  ಹೆಚ್ಚಾಗುತ್ತಿದೆ.ಗೂಳಿಪುರದ ರೈತರು ತಾಲೂಕು ಪಶು ವೈದ್ಯಾಧಿಕಾರಿ ಬಳಿ ತಮ್ಮ ಜಾನುವಾರುಗಳಿಗೆ ಚಿಕಿತ್ಸೆ ನೀಡಿ ರಕ್ಷಣೆ ಮಾಡಿ ಎಂದು ಸುಮಾರು 15 ದಿನಗಳಿಂದ ಅಲೆದಾಡುತ್ತಿದ್ದರೂ ಪ್ರಯೋಜನವಾಗಿಲ್ಲ.

ತಾಲೂಕು ಪಶು ವೈದ್ಯಾಧಿಕಾರಿ ನಮ್ಮತ್ರ ಅದರ ಮೆಡಿಸನ್ ಇಲ್ಲ, ಇಂಜೆಕ್ಷನ್ ಗಳಿಲ್ಲ ಎಂದು ಬೇಜವಾಬ್ದಾರಿ ಹೇಳಿಕೆ ಮಾಡುತ್ತಿರುವುದರಿಂದ ರೈತರಲ್ಲಿ ಆತಂಕ ಉಂಟು ಮಾಡಿದೆ. ದಿನೇದಿನೇ ರೋಗ ಹರಡುವ ಆತಂಕ ಎದುರಾಗಿದೆ. ಸೂಕ್ತ ಕಾಲಕ್ಕೆ ಪಶುಗಳಿಗೆ ಕಾಲು ಬಾಯಿ ರೋಗ ಹರಡದಂತೆ ಪಶು ಸಂಗೋಪನಾ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ರೈತರು ಮಾಧ್ಯಮಗಳ ಮೊರೆ ಹೋಗಿದ್ದಾರೆ. ಆದಷ್ಟು ಬೇಗ ಸಂಬಂಧಪಟ್ಟ ಜಿಲ್ಲಾ, ತಾಲೂಕು ಪಶು ವೈದ್ಯಾಧಿಕಾರಿಗಳು  ತಮ್ಮ ಜಾನುವಾರುಗಳನ್ನು ಚಿಕಿತ್ಸೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಪಶುಸಂಗೋಪನೆ ನಂಬಿಕೊಂಡಿರುವ ರೈತರಿಗೆ ಇದು ಅವರ ಪ್ರಮುಖ ಆದಾಯದ ಮೂಲವಾಗಿದೆ. ಕಾಲುಬಾಯಿ ರೋಗ ಹೈನೋದ್ಯಮಕ್ಕೆ ಪೆಟ್ಟು ನೀಡುವ ಸಾಧ್ಯತೆ ಹೆಚ್ಚಾಗಿದೆ. ಅದಲ್ಲದೆ ಸುಮಾರು 150 ಹೆಚ್ಚು ಎಮ್ಮೆ ಮತ್ತು ಹಸು, ಕುರಿ, ಮೇಕೆಗಳಲ್ಲಿ ರೋಗ ಕಂಡು ಬಂದಿದೆ. ಇನ್ನಾದರೂ ಸಂಬಂಧಪಟ್ಟ ಪಶು ವೈದ್ಯಾಧಿಕಾರಿಗಳು ಎಚ್ಚೆತ್ರುಕೊಳ್ಳುವ ಅಗತ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು