10:10 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಕಾನ- ಬಾಳ ರಸ್ತೆ ಕಾಮಗಾರಿ ವಿಳಂಬ ವಿರೋಧಿಸಿ ಡಿವೈಎಫ್ಐ ರಸ್ತೆತಡೆ, ಪ್ರತಿಭಟನೆ

17/03/2023, 22:05

ಸುರತ್ಕಲ್(reporterkarnataka.com): ನೆನೆಗುದಿಗೆ ಬಿದ್ದಿರುವ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಒತ್ತಾಯಿಸಿ ಶುಕ್ರವಾರ ಕಾನ ಜಂಕ್ಷನ್ ಬಳಿ ಡಿವೈಎಫ್ಐ ಮತ್ತು ಆಟೋರಿಕ್ಷಾ ಚಾಲಕರ ಸಂಘ ಜಂಟಿಯಾಗಿ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಿತು.

ಜನರ ಹೋರಾಟದಿಂದ ಮೇಲ್ದರ್ಜೆಗೇರಿದ್ದ ಸುರತ್ಕಲ್-ಕಾನ-ಬಾಳ ರಸ್ತೆಯ ಅಭಿವೃದ್ಧಿ ಕಾರ್ಯವು ಕಾನ ಜಂಕ್ಷನ್ ವರೆಗೆ ಮಾತ್ರ ಕಾಂಕ್ರಿಟಿಕರಣ ಆಗಿದ್ದು ಕಾನ ದಿಂದ ಬಾಳ, ಎಂಆರ್ ಪಿಎಲ್ ಮುಖ್ಯ ದ್ವಾರದ ವರೆಗಿನ 1.75 ಕಿಮೀ ರಸ್ತೆ ಕಾಮಗಾರಿ ಕುಂಟುತ್ತಾ ಸಾಗುತ್ತಿದೆ. ಇದರಿಂದಾಗಿ ಸಾರ್ವಜನಿಕರ ಸುಗಮ ಸಂಚಾರಕ್ಕೆ, ರಸ್ತೆಯ ಅಪೂರ್ಣ ಕಾಮಗಾರಿಯಿಂದ ಪರಿಸರದಲ್ಲಿ ಧೂಳು ಹರಡಿ ಜನರ ಆರೋಗ್ಯಕ್ಕೆ ತೊಂದರೆ ಆಗುತ್ತಿದೆ. ಅಂಗನವಾಡಿಯ ಮಕ್ಕಳು ಅನಾರೋಗ್ಯಕ್ಕೆ ತುತ್ತಾಗಿ ಅಂಗನವಾಡಿ ಕೇಂದ್ರ ಮುಚ್ಚುವ ಸ್ಥಿತಿಗೆ ತಲುಪಿದೆ. ಕಾಮಗಾರಿಯ ಗುತ್ತಿಗೆ ವಹಿಸಿಕೊಂಡ ಗುತ್ತಿಗೆದಾರನ ಮೇಲೆ ಕ್ರಮ ಕೈಗೊಂಡು ಕೂಡಲೇ ಕಾಮಗಾರಿ ಪೂರ್ಣಗೊಳಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು ಒಂದು ತಿಂಗಳ ಒಳಗೆ ಕಾಮಗಾರಿ ಪೂರ್ಣಗೊಳ್ಳದಿದ್ದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್ ಎಚ್ಚರಿಸಿದರು.

ಡಿವೈಎಫ್ಐ ನಗರ ಉಪಾಧ್ಯಕ್ಷ ಶ್ರೀನಾಥ್ ಕುಲಾಲ್, ಆಟೋ ರಿಕ್ಷಾ ಚಾಲಕರ ಸಂಘದ ಮುಖಂಡ ಗಣೇಶ್ ಪ್ರೇಮ್ ನಗರ ಪ್ರತಿಭಟನೆಯಲ್ಲಿ ಮಾತನಾಡಿದರು.
ಡಿವೈಎಫ್ಐ ಮುಖಂಡರಾದ ಸಾದಿಕ್ ಕಿಲ್ಪಾಡಿ,ಮುಸ್ತಫಾ ಅಂಗರಗುಂಡಿ, ನವಾಜ್ ಕುಳಾಯಿ, ಮಕ್ಸೂದ್ ಬಿಕೆ, ಐ ಮೊಹಮ್ಮದ್, ರಫೀಕ್ ಸ್ಟಾರ್, ಹುಸೈನ್ ಬಾಳ, ಸೈಫರ್ ಆಲಿ ಚೊಕ್ಕಬೆಟ್ಟು, ಮಾರುಕಟ್ಟೆ ವ್ಯಾಪಾರಸ್ಥರ ಸಂಘದ ಮೊಹಮ್ಮದ್ ಶರೀಫ್ ಕಾನ, ಸಾಮಾಜಿಕ ಮುಂದಾಳುಗಳಾದ ಜಗದೀಶ್ ಕಾನ, ಫ್ರಾನ್ಸಿಸ್, ಮೆಹಬೂಬ್ ಖಾನ್, ಆಟೋ ರಿಕ್ಷಾ ಚಾಲಕರ ಸಂಘದ ಹಂಝ ಮೈಂದಗುರಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು