3:22 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

‘ಕಾಣದಂತೆ ಮಾಯವಾದನು ನಮ್ಮ ಶಿವ..’ ಹಾಡಿ ಕುಣಿದ ಪೋರ ಈ ‘ರಾಜಕುಮಾರ’

29/10/2021, 15:26

ಅಶೋಕ್ ಕಲ್ಲಡ್ಕ ಮಂಗಳೂರು
info.reporterkarnataka@gmail.com

ಪುನೀತ್ ರಾಜ್ ಕುಮಾರ್…

ಕನ್ನಡದ ವರನಟ ಡಾ. ರಾಜ್ ಕುಮಾರ್ – ಪಾರ್ವತಿಯಮ್ಮ ದಂಪತಿಯ ಕೊನೆಯ ಪುತ್ರ. ಚಿಕ್ಕ ವಯಸ್ಸಿನಲ್ಲಿ ಬಣ್ಣ ಹಚ್ಚಿಕೊಂಡು ಬೆಳ್ಳಿಪರದೆಯಲ್ಲಿ ಕುಣಿದ ಪೋರ. ಅಷ್ಟೇ ಅಲ್ಲ ಬಾಲನಟನಾಗಿರುವಾಗಲೇ ಸಿನಿಮಾ ರಸಿಕರ ಹೃದಯಕ್ಕೆ ಲಗ್ಗೆ ಹಾಕಿದ ತುಂಟ.

ಡಾ. ರಾಜ್ ಕುಮಾರ್ ಹಾಗೂ ಅಂಬಿಕಾ ಅಭಿನಯದ’ಚಲಿಸುವ ಮೋಡಗಳು’ ಸಿನಿಮಾ ನೋಡಿದವರಿಗೆ ಆ ದೃಶ್ಯವನ್ನು ಮರೆಯಲು ಖಂಡಿತಾ ಸಾಧ್ಯವಿಲ್ಲ. ಬಾಯಿಯಲ್ಲಿ ಮೌತ್ ಆರ್ಗಾನ್ ನುಡಿಸುತ್ತಾ ‘ಕಾಣದಂತೆ ಮಾಯಾದನು ನಮ್ಮ ಶಿವ ಕೈಲಾಸ ಸೇರಿಕೊಂಡನು’ ಎಂದು ಹಾಡಿ ಕುಣಿದು ಕುಪ್ಪಳಿಸಿದ ಅ ಅಪ್ಪುವನ್ನು ಯಾರು ತಾನೆ ಮರೆಯಲು ಸಾಧ್ಯ?. 


ಚಿಕ್ಕ ವಯಸ್ಸಿನಿಂದಲೂ ಸಿನಿಮಾರಂಗಕ್ಕೆ ಕಾಲಿಟ್ಟ ಪುನೀತ್ ರಾಜ್ ಕುಮಾರ್ ಅವರು ಇಂದು ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಅದರಲ್ಲೂ ಫ್ಯಾಮಿಲಿ ಆಡಿಯನ್ಸ್​ ಅವರನ್ನು ಹೆಚ್ಚು ಇಷ್ಟಪಡುತ್ತಾರೆ. ಮಕ್ಕಳಿಗೂ ಅಪ್ಪು ಎಂದರೆ ಅಚ್ಚುಮೆಚ್ಚು.

ಪುನೀತ್​ ರಾಜ್​ಕುಮಾರ್​ ಅವರು ಸದ್ಯ ‘ಜೇಮ್ಸ್​’ ಸಿನಿಮಾದ ಕೆಲಸಲ್ಲಿ ಬ್ಯುಸಿಯಾಗಿದ್ದರು.ಚೇತನ್​ಕುಮಾರ್​ ನಿರ್ದೇಶನದ ಸಿನಿಮಾ ಇದಾಗಿತ್ತು. ಇಷ್ಟೇ ಅಲ್ಲದೆ ಪವನ್​ಕುಮಾರ್​ ನಿರ್ದೇಶನದ ‘ದ್ವಿತ್ವ’ ಚಿತ್ರದಲ್ಲೂ ಅಪ್ಪು ನಟಿಸುತ್ತಿದ್ದಾರೆ. ಆದರೆ ವಿಧಿಯಾಟ ಮಾತ್ರ ಬೇರೆಯೇ ಆಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು