8:32 PM Tuesday28 - April 2026
ಬ್ರೇಕಿಂಗ್ ನ್ಯೂಸ್
ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು

ಇತ್ತೀಚಿನ ಸುದ್ದಿ

‘ಕಾಣದಂತೆ ಮಾಯವಾದನು ನಮ್ಮ ಶಿವ..’ ಹಾಡಿ ಕುಣಿದ ಪೋರ ಈ ‘ರಾಜಕುಮಾರ’

29/10/2021, 15:26

ಅಶೋಕ್ ಕಲ್ಲಡ್ಕ ಮಂಗಳೂರು
info.reporterkarnataka@gmail.com

ಪುನೀತ್ ರಾಜ್ ಕುಮಾರ್…

ಕನ್ನಡದ ವರನಟ ಡಾ. ರಾಜ್ ಕುಮಾರ್ – ಪಾರ್ವತಿಯಮ್ಮ ದಂಪತಿಯ ಕೊನೆಯ ಪುತ್ರ. ಚಿಕ್ಕ ವಯಸ್ಸಿನಲ್ಲಿ ಬಣ್ಣ ಹಚ್ಚಿಕೊಂಡು ಬೆಳ್ಳಿಪರದೆಯಲ್ಲಿ ಕುಣಿದ ಪೋರ. ಅಷ್ಟೇ ಅಲ್ಲ ಬಾಲನಟನಾಗಿರುವಾಗಲೇ ಸಿನಿಮಾ ರಸಿಕರ ಹೃದಯಕ್ಕೆ ಲಗ್ಗೆ ಹಾಕಿದ ತುಂಟ.

ಡಾ. ರಾಜ್ ಕುಮಾರ್ ಹಾಗೂ ಅಂಬಿಕಾ ಅಭಿನಯದ’ಚಲಿಸುವ ಮೋಡಗಳು’ ಸಿನಿಮಾ ನೋಡಿದವರಿಗೆ ಆ ದೃಶ್ಯವನ್ನು ಮರೆಯಲು ಖಂಡಿತಾ ಸಾಧ್ಯವಿಲ್ಲ. ಬಾಯಿಯಲ್ಲಿ ಮೌತ್ ಆರ್ಗಾನ್ ನುಡಿಸುತ್ತಾ ‘ಕಾಣದಂತೆ ಮಾಯಾದನು ನಮ್ಮ ಶಿವ ಕೈಲಾಸ ಸೇರಿಕೊಂಡನು’ ಎಂದು ಹಾಡಿ ಕುಣಿದು ಕುಪ್ಪಳಿಸಿದ ಅ ಅಪ್ಪುವನ್ನು ಯಾರು ತಾನೆ ಮರೆಯಲು ಸಾಧ್ಯ?. 


ಚಿಕ್ಕ ವಯಸ್ಸಿನಿಂದಲೂ ಸಿನಿಮಾರಂಗಕ್ಕೆ ಕಾಲಿಟ್ಟ ಪುನೀತ್ ರಾಜ್ ಕುಮಾರ್ ಅವರು ಇಂದು ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಅದರಲ್ಲೂ ಫ್ಯಾಮಿಲಿ ಆಡಿಯನ್ಸ್​ ಅವರನ್ನು ಹೆಚ್ಚು ಇಷ್ಟಪಡುತ್ತಾರೆ. ಮಕ್ಕಳಿಗೂ ಅಪ್ಪು ಎಂದರೆ ಅಚ್ಚುಮೆಚ್ಚು.

ಪುನೀತ್​ ರಾಜ್​ಕುಮಾರ್​ ಅವರು ಸದ್ಯ ‘ಜೇಮ್ಸ್​’ ಸಿನಿಮಾದ ಕೆಲಸಲ್ಲಿ ಬ್ಯುಸಿಯಾಗಿದ್ದರು.ಚೇತನ್​ಕುಮಾರ್​ ನಿರ್ದೇಶನದ ಸಿನಿಮಾ ಇದಾಗಿತ್ತು. ಇಷ್ಟೇ ಅಲ್ಲದೆ ಪವನ್​ಕುಮಾರ್​ ನಿರ್ದೇಶನದ ‘ದ್ವಿತ್ವ’ ಚಿತ್ರದಲ್ಲೂ ಅಪ್ಪು ನಟಿಸುತ್ತಿದ್ದಾರೆ. ಆದರೆ ವಿಧಿಯಾಟ ಮಾತ್ರ ಬೇರೆಯೇ ಆಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು