10:35 PM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಕಾಣಿಯೂರು : ಕಾರು ಹೊಳಗೆ ಬಿದ್ದ ಪ್ರಕರಣ ; ಇಬ್ಬರ ಮೃತದೇಹ ಪತ್ತೆ

12/07/2022, 16:23

ಪುತ್ತೂರು :Reporterkarnataka.com : ಕಾಣಿಯೂರು ಸಮೀಪ ಬೈತ್ತಡ್ಕ ಹೊಳೆಗೆ ಕಾರು ಬಿದ್ದ ಪ್ರಕರಣಕ್ಕೆ ಸಂಬಂಧಿಸಿ ಬೈತ್ತಡ್ಕದಿಂದ 200 ಮೀಟರ್ ದೂರ ಮರಕ್ಕಡ ಹೊಳೆಯಲ್ಲಿ ಇಬ್ಬರ ಮೃತ ದೇಹ ಮಂಗಳವಾರ ಮುಂಜಾನೆ ಪತ್ತೆಯಾಗಿದೆ.

ಓರ್ವನ ಮೃತ ದೇಹವು ಹೊಳೆಯ ಬದಿಯಲ್ಲಿದ್ದ ಮರದ ದಿಮ್ಮಿಯಲ್ಲಿ ಪತ್ತೆಯಾಗಿದ್ದು, ಹೊಳೆಯಲ್ಲಿ ನೀರು ಕಡಿಮೆಯಾದ ಹಿನ್ನಲೆಯಲ್ಲಿ ಬೆಳಕಿಗೆ ಬಂದಿದೆ. ಮತ್ತೊಬ್ಬನ ಮೃತದೇಹವು ೫೦ ಮೀಟರ್ ದೂರದ ಅಂತರದಲ್ಲಿ ಪತ್ತೆಯಾಗಿದೆ.ಕಡಬ ತಾಲೂಕಿನ ಕಾಣಿಯೂರು ಸಮೀಪದ ಬೈತಡ್ಕ ಗೌರಿ ಹೊಳೆಗೆ ಕಾರೊಂದು ಬಿದ್ದು ಯುವಕರಿಬ್ಬರು ನಾಪತ್ತೆಯಾದ ಘಟನೆ ಜು. 9ರಂದು ತಡರಾತ್ರಿ ನಡೆದಿತ್ತು. ಬಂಟ್ವಾಳ ತಾಲೂಕಿನ ವಿಟ್ಲ ಮುಟ್ನೂರು ಗ್ರಾಮದ ಕುಂಡಡ್ಕ-ಸಾಂತ್ಯಡ್ಕ ನಿವಾಸಿ ಚೋಮ ನಾಯ್ಕ ಅವರ ಪುತ್ರ ಧನುಷ್‌ (25) ಹಾಗೂ ವಿಟ್ಲ ಕನ್ಯಾನ ನಿವಾಸಿ ಧನುಷ್‌ (21) ಕಾರಿನಲ್ಲಿದ್ದರು ಎನ್ನಲಾಗಿದ್ದು, ಅವರು ನಾಪತ್ತೆಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು