11:09 PM Thursday15 - May 2025
ಬ್ರೇಕಿಂಗ್ ನ್ಯೂಸ್
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು

ಇತ್ತೀಚಿನ ಸುದ್ದಿ

ಕಾನೂನು ಉಲ್ಲಂಘಿಸಿ ಏಕಮುಖ ಸಂಚಾರ ರಸ್ತೆಯಲ್ಲಿ ಬೈಕ್ ಚಲಾಯಿಸಿದ ಕಾನ್ ಸ್ಟೇಬಲ್!: ಪ್ರಾಮಾಣಿಕತೆ ಮೆರೆದ ಟ್ರಾಫಿಕ್ ಪೊಲೀಸ್!!

20/09/2022, 14:07

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಪೊಲೀಸ್ ಕಾನ್ ಸ್ಟೇಬಲ್ ವೊಬ್ಬರು ವನ್ ವೇ ನಲ್ಲಿ ಬೈಕ್ ಚಲಿಸಿಕೊಂಡು ಹೋದಾಗ ಟ್ರಾಫಿಕ್ ಪೊಲೀಸ್ ಅವರ ಫೋಟೋ ಕ್ಲಿಕ್ಕಿಸಿ ವೃತ್ತಿಧರ್ಮ ಮೆರೆದ ಘಟನೆ ಎಲ್ಲರ ಶ್ಲಾಘನೆಗೆ ಪಾತ್ರವಾಗಿದೆ.

ನಗರದ ಹೃದಯಭಾಗವಾದ ಕ್ಲಾಕ್ ಟವರ್ ನಿಂದ ಫಾತಿಮಾ ಸ್ಟೋರ್ ಮಾರ್ಗವಾಗಿ ಮಾರ್ಕೆಟ್ ತಲುಪುವ ಏಕಮುಖ ಸಂಚಾರ ರಸ್ತೆಯಲ್ಲಿ ಪೊಲೀಸ್ ಕಾನ್ ಸ್ಟೇಬಲ್ ವೊಬ್ಬರು ಆರಾಮವಾಗಿ ತನ್ನ ಬೈಕ್ ನಲ್ಲಿ ಸಂಚರಿಸುತ್ತಿದ್ದರು. ಇದು ಬೇಲಿಯೇ ಎದ್ದು ಹೊಲ ಮೇಯ್ದ ಪ್ರಸಂಗವಾಗಿದ್ದು, ಆ ಜಾಗದಲ್ಲಿ ಕರ್ತವ್ಯ ನಿರತರಾಗಿದ್ದ ಟ್ರಾಫಿಕ್ ಪೊಲೀಸರೊಬ್ಬರು ಯಾವುದೇ ತಾರತಮ್ಯ ಮಾಡದೆ ಕಾನೂನು ಉಲ್ಲಂಘಿಸಿದ ಕಾನ್ ಸ್ಟೇಬಲ್ ಅವರ ಫೋಟೋ ಕ್ಲಿಕ್ಕಿಸಿದರು. ಪ್ರಾಮಾಣಿಕತೆ ಮೆರೆದ ಪೊಲೀಸ್ ಸಂದೀಪ್ ಅವರು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ನಗರದ ಕ್ಲಾಕ್ ಟವರ್ ನಿಂದ ಫಾತಿಮಾ ಸ್ಟೋರ್ ಮಾರ್ಗವಾಗಿ ಮಾರ್ಕೆಟ್ ತಲುಪುವ ರಸ್ತೆ ಏಕಮುಖ ಸಂಚಾರ ಎಂದು ತಿಳಿದಿದ್ದರೂ, ಅರ್ಧ ಭಾಗ ಬ್ಯಾರಿಗೇಟ್ ಹಾಕಿದ್ದರೂ ಜನರು ಪೊಲೀಸರ  ಎದುರಲ್ಲೆ ವಾಹನಗಳಲ್ಲಿ ತೆರಳುತ್ತಾರೆ. 

ಪೊಲೀಸರೂ ಎಂದಿನಂತೆ ಮೊಬೈಲ್ ನಲ್ಲಿ ಫೋಟೋ ಕ್ಲಿಕ್ಕಿಸುತ್ತಾರೆ. ನಂತರ ಫೈನ್ ಹಾಕಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು