6:13 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಕಾನೂನು ಉಲ್ಲಂಘಿಸಿ ಏಕಮುಖ ಸಂಚಾರ ರಸ್ತೆಯಲ್ಲಿ ಬೈಕ್ ಚಲಾಯಿಸಿದ ಕಾನ್ ಸ್ಟೇಬಲ್!: ಪ್ರಾಮಾಣಿಕತೆ ಮೆರೆದ ಟ್ರಾಫಿಕ್ ಪೊಲೀಸ್!!

20/09/2022, 14:07

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಪೊಲೀಸ್ ಕಾನ್ ಸ್ಟೇಬಲ್ ವೊಬ್ಬರು ವನ್ ವೇ ನಲ್ಲಿ ಬೈಕ್ ಚಲಿಸಿಕೊಂಡು ಹೋದಾಗ ಟ್ರಾಫಿಕ್ ಪೊಲೀಸ್ ಅವರ ಫೋಟೋ ಕ್ಲಿಕ್ಕಿಸಿ ವೃತ್ತಿಧರ್ಮ ಮೆರೆದ ಘಟನೆ ಎಲ್ಲರ ಶ್ಲಾಘನೆಗೆ ಪಾತ್ರವಾಗಿದೆ.

ನಗರದ ಹೃದಯಭಾಗವಾದ ಕ್ಲಾಕ್ ಟವರ್ ನಿಂದ ಫಾತಿಮಾ ಸ್ಟೋರ್ ಮಾರ್ಗವಾಗಿ ಮಾರ್ಕೆಟ್ ತಲುಪುವ ಏಕಮುಖ ಸಂಚಾರ ರಸ್ತೆಯಲ್ಲಿ ಪೊಲೀಸ್ ಕಾನ್ ಸ್ಟೇಬಲ್ ವೊಬ್ಬರು ಆರಾಮವಾಗಿ ತನ್ನ ಬೈಕ್ ನಲ್ಲಿ ಸಂಚರಿಸುತ್ತಿದ್ದರು. ಇದು ಬೇಲಿಯೇ ಎದ್ದು ಹೊಲ ಮೇಯ್ದ ಪ್ರಸಂಗವಾಗಿದ್ದು, ಆ ಜಾಗದಲ್ಲಿ ಕರ್ತವ್ಯ ನಿರತರಾಗಿದ್ದ ಟ್ರಾಫಿಕ್ ಪೊಲೀಸರೊಬ್ಬರು ಯಾವುದೇ ತಾರತಮ್ಯ ಮಾಡದೆ ಕಾನೂನು ಉಲ್ಲಂಘಿಸಿದ ಕಾನ್ ಸ್ಟೇಬಲ್ ಅವರ ಫೋಟೋ ಕ್ಲಿಕ್ಕಿಸಿದರು. ಪ್ರಾಮಾಣಿಕತೆ ಮೆರೆದ ಪೊಲೀಸ್ ಸಂದೀಪ್ ಅವರು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ನಗರದ ಕ್ಲಾಕ್ ಟವರ್ ನಿಂದ ಫಾತಿಮಾ ಸ್ಟೋರ್ ಮಾರ್ಗವಾಗಿ ಮಾರ್ಕೆಟ್ ತಲುಪುವ ರಸ್ತೆ ಏಕಮುಖ ಸಂಚಾರ ಎಂದು ತಿಳಿದಿದ್ದರೂ, ಅರ್ಧ ಭಾಗ ಬ್ಯಾರಿಗೇಟ್ ಹಾಕಿದ್ದರೂ ಜನರು ಪೊಲೀಸರ  ಎದುರಲ್ಲೆ ವಾಹನಗಳಲ್ಲಿ ತೆರಳುತ್ತಾರೆ. 

ಪೊಲೀಸರೂ ಎಂದಿನಂತೆ ಮೊಬೈಲ್ ನಲ್ಲಿ ಫೋಟೋ ಕ್ಲಿಕ್ಕಿಸುತ್ತಾರೆ. ನಂತರ ಫೈನ್ ಹಾಕಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು