1:51 AM Tuesday13 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಕಾರು-ಆಟೋ ಢಿಕ್ಕಿ: ಆಟೊದಲ್ಲಿದ್ದ ಮೂವರು ಮೃತ್ಯು, ಇಬ್ಬರು ಗಂಭೀರ” ಗಾಯ

14/07/2022, 14:27

ಮಂಡ್ಯ:Reporterkarnataka.com :ಕಾರು ಮತ್ತು ಆಟೊ ಮುಖಾಮುಖಿ ಡಿಕ್ಕಿ ಯಾದ ಘಟನೆ
ಮಳವಳ್ಳಿ ಪಟ್ಟಣದ ಹೊರವಲಯ ಕಣಿಗಲ್ ಗೇಟ್ ಬಳಿ ಬುಧವಾರ ತಡರಾತ್ರಿ ನಡೆದಿದೆ.

ಆಟೊದಲ್ಲಿದ್ದ ಮೂವರು ಮೃತಪಟ್ಟಿದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ರವಿಕುಮಾರ್(50), ಭಾಸ್ಕರ್ (48) ಹಾಗೂ ಮೃತ ಪಟ್ಟ ಆಟೊ ಚಾಲಕ ಮದ್ದೂರು ತಾಲ್ಲೂಕಿನ ಹುಲಿಗೆರೆ ಗ್ರಾಮದ ಶ್ರೀನಿವಾಸ್ (35) ಎಂದು ಗುರುತಿಸಲಾಗಿದೆ.

ರವಿಕುಮಾರ್ ಜಯ ಕರ್ನಾಟಕ ಜನಪರ ವೇದಿಕೆಯ ರಾಜ್ಯ ಘಟಕದ ಕಾರ್ಯದರ್ಶಿಯಾಗಿದ್ದು, ತಮ್ಮ ಹುಟ್ಟೂರು ತಾಲ್ಲೂಕಿನ ಕಣಿಕಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ವಾಪಸ್ ಬೆಂಗಳೂರಿಗೆ ಆಟೊದಲ್ಲಿ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯ ಕಣಿಗಲ್ ಬಳಿ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.

ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಲ್ಲಿ ಆಟೊ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ ಕಾರು ಸಹ ಜಖಂಗೊಂಡಿದ್ದು . ಸ್ಥಳಕ್ಕೆ ಡಿವೈಎಸ್ಪಿ ನವೀನ್ ಕುಮಾರ್, ಸಿಪಿಐ ಎ.ಕೆ.ರಾಜೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು