9:43 PM Thursday20 - August 2026
ಬ್ರೇಕಿಂಗ್ ನ್ಯೂಸ್
ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ

ಇತ್ತೀಚಿನ ಸುದ್ದಿ

ಕಾರು-ಆಟೋ ಢಿಕ್ಕಿ: ಆಟೊದಲ್ಲಿದ್ದ ಮೂವರು ಮೃತ್ಯು, ಇಬ್ಬರು ಗಂಭೀರ” ಗಾಯ

14/07/2022, 14:27

ಮಂಡ್ಯ:Reporterkarnataka.com :ಕಾರು ಮತ್ತು ಆಟೊ ಮುಖಾಮುಖಿ ಡಿಕ್ಕಿ ಯಾದ ಘಟನೆ
ಮಳವಳ್ಳಿ ಪಟ್ಟಣದ ಹೊರವಲಯ ಕಣಿಗಲ್ ಗೇಟ್ ಬಳಿ ಬುಧವಾರ ತಡರಾತ್ರಿ ನಡೆದಿದೆ.

ಆಟೊದಲ್ಲಿದ್ದ ಮೂವರು ಮೃತಪಟ್ಟಿದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ರವಿಕುಮಾರ್(50), ಭಾಸ್ಕರ್ (48) ಹಾಗೂ ಮೃತ ಪಟ್ಟ ಆಟೊ ಚಾಲಕ ಮದ್ದೂರು ತಾಲ್ಲೂಕಿನ ಹುಲಿಗೆರೆ ಗ್ರಾಮದ ಶ್ರೀನಿವಾಸ್ (35) ಎಂದು ಗುರುತಿಸಲಾಗಿದೆ.

ರವಿಕುಮಾರ್ ಜಯ ಕರ್ನಾಟಕ ಜನಪರ ವೇದಿಕೆಯ ರಾಜ್ಯ ಘಟಕದ ಕಾರ್ಯದರ್ಶಿಯಾಗಿದ್ದು, ತಮ್ಮ ಹುಟ್ಟೂರು ತಾಲ್ಲೂಕಿನ ಕಣಿಕಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ವಾಪಸ್ ಬೆಂಗಳೂರಿಗೆ ಆಟೊದಲ್ಲಿ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯ ಕಣಿಗಲ್ ಬಳಿ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.

ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಲ್ಲಿ ಆಟೊ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ ಕಾರು ಸಹ ಜಖಂಗೊಂಡಿದ್ದು . ಸ್ಥಳಕ್ಕೆ ಡಿವೈಎಸ್ಪಿ ನವೀನ್ ಕುಮಾರ್, ಸಿಪಿಐ ಎ.ಕೆ.ರಾಜೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು