6:47 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಖಾಸಗಿ ಬಸ್ ಪ್ರಯಾಣ ದರ ಏರಿಕೆ ತಡೆ ಹಿಡಿದು ಪ್ರಾಧಿಕಾರದ ಸಭೆ ಕರೆಯಿರಿ: ಜಾತ್ಯತೀತ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳ ಆಗ್ರಹ

11/08/2021, 14:36

ಮಂಗಳೂರು(reporterkarnataka.com): ಖಾಸಗೀ ಬಸ್ ಪ್ರಯಾಣ ದರದ ವಿಪರೀತ ಏರಿಕೆಯನ್ನು  ಖಂಡಿಸಿ, ದ.ಕ.ಜಿಲ್ಲಾಡಳಿತದ ಏಕಪಕ್ಷೀಯ ನಿರ್ಧಾರವನ್ನು ವಿರೋಧಿಸಿ, ದ.ಕ.ಜಿಲ್ಲೆಯ ಜಾತ್ಯತೀತ ಪಕ್ಷಗಳ ಹಾಗೂ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮನವಿ ಅರ್ಪಿಸಲಾಯಿತು.

ಸಾರಿಗೆ ಪ್ರಾಧಿಕಾರದ ಸಭೆಯನ್ನು ಕರೆಯದೆ ಏಕಾಏಕಿಯಾಗಿ ಬಸ್ ಪ್ರಯಾಣ ದರವನ್ನು ಏರಿಸಿದ್ದು, ಸರ್ವಥಾ ಸರಿಯಲ್ಲ. ಕೊರೊನಾ ಸಂಕಷ್ಟದ ಕಾಲಘಟ್ಟದಲ್ಲಿ ಜಿಲ್ಲೆಯ ಲಕ್ಷಾಂತರ ಜನತೆ ಉದ್ಯೋಗವಿಲ್ಲದೆ ಆರ್ಥಿಕ ಸಮಸ್ಯೆಯಿಂದ ತೀವ್ರವಾಗಿ ಕಂಗೆಟ್ಟಿರುವಾಗ ಜಿಲ್ಲಾಧಿಕಾರಿ ಗಳು ಕೇವಲ ನೂರಾರು ಸಂಖ್ಯೆಯಲ್ಲಿರುವ ಬಸ್ ಮಾಲೀಕರ ನೋವಿಗೆ ಸ್ಪಂದಿಸುವ ನೆಪದಲ್ಲಿ ಸಾರಿಗೆ ಪ್ರಾಧಿಕಾರದ ನಿಯಮಗಳನ್ನು ಉಲ್ಲಂಘಿಸಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿರುವ ಸರ್ವ ರಾಜಕೀಯ ಪಕ್ಷಗಳು,ಕೂಡಲೇ ಏರಿಸಿದ ದರವನ್ನು ತಡೆ ಹಿಡಿದು, ಸಾರಿಗೆ ಪ್ರಾಧಿಕಾರದ ಸಭೆಯನ್ನು ಕರೆದು ಸಾರ್ವಜನಿಕರ ಅಹವಾಲನ್ನು ಸ್ವೀಕರಿಸಿ ಸೂಕ್ತ ತೀರ್ಮಾನವನ್ನು ಕೈಗೊಳ್ಳಬೇಕೆಂದು ಒಕ್ಕೊರಲಿನಿಂದ ಒತ್ತಾಯಿಸಿವೆ.

ನಿಯೋಗದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾದ ಸದಾಶಿವ ಉಳ್ಳಾಲ್, ಶಶಿಧರ್ ಹೆಗ್ಡೆ, ನೀರಜ್ ಪಾಲ್, ಸಿಪಿಎಂ ನಾಯಕರಾದ ವಸಂತ ಆಚಾರಿ, ಸುನಿಲ್ ಕುಮಾರ್ ಬಜಾಲ್, ಸಿಪಿಐ ಮುಖಂಡರಾದ ಕರುಣಾಕರ್, ಜಗತ್ಪಾಲ್, ಜಾತ್ಯತೀತ ಜನತಾದಳದ ಮುಖಂಡರಾದ ಸುಮತಿ ಎಸ್ ಹೆಗ್ಡೆ, ಅಲ್ತಾಫ್ ತುಂಬೆ, ಡಿವೈಎಫ್ ಐI ನಾಯಕರಾದ ಮುನೀರ್ ಕಾಟಿಪಳ್ಳ, ಸಂತೋಷ್ ಬಜಾಲ್, ದಲಿತ ಸಂಘಟನೆಗಳ ನಾಯಕರಾದ ಎಂ.ದೇವದಾಸ್, ರಘು ಎಕ್ಕಾರು, ತಿಮ್ಮಯ್ಯ ಕೊಂಚಾಡಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು