ಇತ್ತೀಚಿನ ಸುದ್ದಿ
ಖಾತೆ ಬದಲಾವಣೆಗೆ 20 ಸಾವಿರ ಬೇಡಿಕೆ: ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ
22/06/2023, 18:24

ಮಂಗಳೂರು(reporterkarnataka.com): ಖಾತೆ ಬದಲಾವಣೆ ಸಂಬಂಧ ಲಂಚಕ್ಕೆ ಬೇಡಿಕೆಯಿಟ್ಟ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಕೌಕ್ರಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಜಿ.ಎನ್. ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಅಧಿಕಾರಿ. ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ನಿವಾಸಿಯೊಬ್ಬರ ಕೌಕ್ರಾಡಿಯ ತಮ್ಮ ಜಮೀನಿನಲ್ಲಿ ಖಾತೆ ಬದಲಾವಣೆಗೆ 20 ಸಾವಿರ ಹಣಕ್ಕೆ ಬೇಡಿಕೆ ಇಟ್ಟದ್ದರು. ಅದರಂತೆ ಜೂ. 22 ರಂದು 20 ಸಾವಿರ ಲಂಚದ ಹಣ ಸ್ವೀಕರಿಸುವ ಸಂದರ್ಭದಲ್ಲಿ ಪಿಡಿಓ ಮಹೇಶ್ ಅವರನ್ನು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಸ್ತಗಿರಿ ಮಾಡಿದ್ದಾರೆ.
ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿ.ಎ. ಸೈಮನ್ ಮಾರ್ಗದರ್ಶನದಲ್ಲಿ ಉಪಾಧೀಕ್ಷಕರಾದ ಕಲಾವತಿ, ಚೆಲುವರಾಜ್ ಹಾಗೂ ಪೊಲೀಸ್ ನಿರೀಕ್ಷಕರ ಅಮಾನುಲ್ಲಾ, ವಿನಾಯಕ ಬಿಲ್ಲವ ಹಾಗೂ ಸಿಬ್ಬಂದಿ ಟ್ರ್ಯಾಪ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.