10:31 AM Wednesday23 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಕಾಟಿಪಳ್ಳ: ಇಬ್ಬರು ಮಕ್ಕಳ ಜತೆ ತಾಯಿ ನಾಪತ್ತೆ; ಮಾಹಿತಿ ಸಿಕ್ಕಿದವರು ಪೊಲೀಸರ ಸಂಪರ್ಕಿಸಿ

29/03/2022, 09:56

ಮಂಗಳೂರು(reporterkarnataka.com):- ಕಾಟಿಪಳ್ಳ ಗ್ರಾಮದ ಗಣೇಶಪುರದಲ್ಲಿ ವಾಸವಿದ್ದ ಗೃಹಿಣಿಯೊಬ್ಬರು ತಮ್ಮ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದಾರೆ.

ಭಾರತಿ ಮಾದರ (35) ಎಂಬವರು  ಮಕ್ಕಳಾದ ಅಮೃತ (11) ಮತ್ತು ಗಣೇಶ್ (9) ಅವರೊಂದಿಗೆ ಮಾ.21ರ ರಾತ್ರಿ ಮನೆಯಿಂದ ತೆರಳಿದವರು ಇದೂವರೆಗೆ ವಾಪಸಾಗಿಲ್ಲ. ಅವರು ಕಾಣೆಯಾಗಿರುವ ಬಗ್ಗೆ ಸುರತ್ಕಲ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಹರೆ- ಭಾರತಿ ಮಾದರ: ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ, 4 ಅಡಿ 6 ಇಂಚು ಎತ್ತರ, ಬಲಗೈಯಲ್ಲಿ ಎಚ್.ಬಿ. ಎಂಬ ಹಚ್ಚೆ ಇದೆ, ಕನ್ನಡ, ಹಿಂದಿ ಮತ್ತು ತುಳು ಭಾಷೆ ಅರ್ಥವಾಗುತ್ತದೆ. ಕಾಣೆಯಾಗುವ ಸಮಯದಲ್ಲಿ ಹಳದಿ ಬಣ್ಣದಲ್ಲಿ ಕೆಂಪು ಚುಕ್ಕೆಗಳಿರುವ ಸೀರೆ ಹಾಗೂ ಕಪ್ಪು ಬಣ್ಣದ ರವಿಕೆ ಧರಿಸಿರುತ್ತಾರೆ.

ಅಮೃತಾ: 3 ಅಡಿ 5ಇಂಚು ಎತ್ತರ, 5ನೇ ತರಗತಿ ಓದುತ್ತಿದ್ದು, ಎಣ್ಣೆ ಕಪ್ಪು ಮೈಬಣ್ಣ, ಕನ್ನಡ ಭಾಷೆ ತಿಳಿದಿರುತ್ತದೆ, ಕಪ್ಪು ಬಣ್ಣದ ಧೋತಿ ಪ್ಯಾಂಟ್ ಮತ್ತು ಕೆಂಪು ಬಣ್ಣದ ಟಾಪ್ ಧರಿಸಿರುತ್ತಾಳೆ.

ಗಣೇಶ: 3 ಅಡಿ ಎತ್ತರ, 3ನೇ ತರಗತಿ ಓದುತ್ತಿದ್ದು, ಎಣ್ಣೆ ಕಪ್ಪು ಮೈಬಣ್ಣ, ಕನ್ನಡ ಭಾಷೆ ತಿಳಿದಿರುತ್ತದೆ, ಕಪ್ಪು ಬಣ್ಣದ ಟೀ ಶರ್ಟ್ ಹಾಗೂ ನೀಲಿ ಬಣ್ಣದ ಚಡ್ಡಿ ಧರಿಸಿರುತ್ತಾರೆ.

ಈ ತಾಯಿ ಮಕ್ಕಳು ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣೆ ದೂ.ಸಂಖ್ಯೆ: 0824-2220540, ಮೊ.ಸಂಖ್ಯೆ:- 9480805360, 9480802345, ಕಂಟ್ರೋಲ್ ರೂಂ: 0824-2220800 ಮೂಲಕ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      *

ಇತ್ತೀಚಿನ ಸುದ್ದಿ

ಜಾಹೀರಾತು